ಭದ್ರಾವತಿ, ಏ. ೨೯ : ಚುನಾವಣಾ ಆಯೋಗದ ಆದೇಶದ ಮೇರೆಗೆ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಸೂಚನೆ ಮೇರೆಗೆ ಏ.೩೦ರಂದು ಬೆಳಿಗ್ಗೆ ೮ ಗಂಟೆಗೆ ನಗರಸಭೆ ವತಿಯಿಂದ 'ನಮ್ಮ ನಡೆ ಮತಗಟ್ಟೆಯ ಕಡೆ' ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ.
ಮತದಾರರಿಗೆ ಮತದಾನ ಹಾಗು ತಮ್ಮ ಮತಗಟ್ಟೆ ಕುರಿತು ಜಾಗೃತಿ ಮೂಡಿಸಲು ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ. ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಕಾಲ್ನಡಿಗೆ ಜಾಥಾ ಆರಂಭಗೊಂಡು ಹಳೇನಗರದ ಬಸವೇಶ್ವರ ವೃತ್ತದವರೆಗೆ ಸಾಗಲಿದೆ. ಜಾಥಾ ಯಶಸ್ವಿಗೊಳಿಸುವಂತೆ ನಗರಸಭೆ ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ.
No comments:
Post a Comment