ಭದ್ರಾವತಿ, ಏ. ೨೫: ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ನಗರಕ್ಕೆ ಬಂದಿದ್ದ ಯುವಕ ಭದ್ರಾನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಸಮೀರ್ (೨೦) ಮೃತ ಯುವಕ ಈತ ಕಳೆದ ೧೫ ದಿನಗಳ ಹಿಂದೆ ಸೋದರ ಮಾವ ನಿಧನರಾದ ಕಾರಣ ನಗರದ ಖಾಜೀ ಮೊಹಲ್ಲಾದಲ್ಲಿರುವ ಅಜ್ಜಿ ಮನೆಗೆ ಬಂದಿದ್ದ. ರಂಜಾನ್ ಹಬ್ಬ ಮುಗಿಸಿಕೊಂಡು ಊರಿಗೆ ಹೋಗುವಂತೆ ಮನೆಯವರೆಲ್ಲ ಹೇಳಿದ್ದರಿಂದ ಇಲ್ಲಿಯೇ ಉಳಿದಿದ್ದ. ಸೋಮವಾರ ಮಧ್ಯಾಹ್ನ ೩.೪೦ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ರೈಲಿನಲ್ಲಿ ತುಮಕೂರಿಗೆ ಪ್ರಯಾಣಿಸಬೇಕಿತ್ತು. ಆದರೆ ಬೆಳಗ್ಗೆ ಸ್ನೇಹಿತರೊಂದಿಗೆ ಮನೆಯ ಹತ್ತಿರವಿದ್ದ ಭದ್ರಾನದಿಗೆ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
No comments:
Post a Comment