ಭದ್ರಾವತಿ, ಏ. ೧೫: ನಗರದ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಾಗಿವೆ.
ಮಾವಿನಕೆರೆ ಗ್ರಾಮದ ನಿವಾಸಿ ಕೆ. ಸಂದೀಪ್ ಎಂಬಾತ ಮನೆಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಒಟ್ಟು ೧೮೦೦ ಎಂ.ಎಲ್ ಪ್ರಮಾಣದ ಅಂದಾಜು ೭೦೨ ರು. ಮೌಲ್ಯದ ಒಟ್ಟು ೨೦ ಮದ್ಯದ ಪೌಚ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಬೊಮ್ಮನಕಟ್ಟೆ ೨ನೇ ಡಿವಿಜನ್ ಟಿಪ್ಪು ಸರ್ಕಲ್ ಬಳಿ ಟೀ ಕ್ಯಾಂಟೀನ್ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೇಪರ್ಟೌನ್ ಠಾಣೆ ಪೊಲೀಸರು ದಾಳಿ ನಡೆಸಿ ೭ ಮದ್ಯ ತುಂಬಿದ ಪೌಚ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
No comments:
Post a Comment