ನ್ಯಾಯವಾದಿ ಕೆ. ಸುಬ್ಬರಾವ್
ಭದ್ರಾವತಿ, ಏ. ೨೧ : ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಗುತ್ತಿಗೆ ಕಾರ್ಮಿಕರ ಪರವಾಗಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸುವ ಮೂಲಕ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡುವಲ್ಲಿ ಹೆಚ್ಚಿನ ಕಾಳಜಿವಹಿಸಿದ್ದ ಹಿರಿಯ ನ್ಯಾಯವಾದಿ ಕೆ. ಸುಬ್ಬರಾವ್ ನಿಧನ ಹೊಂದಿದ್ದಾರೆ.
ಕಾರ್ಮಿಕರಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಸುಬ್ಬರಾವ್ ಹೆಚ್ಚಿನ ಯಶಸ್ಸು ಸಾಧಿಸಿದ್ದರು. ಇವರ ನಿಧನಕ್ಕೆ ಎಂಪಿಎಂ ಎಂಪ್ಲಾಯಿಸ್ ಅಸೋಸಿಯೇಷನ್ ಸಂತಾಪ ಸೂಚಿಸಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುಂದುವರೆದು ನ್ಯಾಯಾಲಯದಲ್ಲಿ ಯಶಸ್ಸು ಕಂಡುಕೊಳ್ಳುವ ಮೂಲಕ ಅವರ ಆತ್ಮಕ್ಕೆ ಶಾಂತಿ ಲಭಿಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಧರ್ಮಲಿಂಗಸ್ವಾಮಿ ತಿಳಿಸಿದ್ದಾರೆ.
No comments:
Post a Comment