ಕ್ರೈಸ್ತ ಸಮಾಜದವರು ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಹಬ್ಬದ ಶುಭಾಶಯ ಕೋರುವ ಮೂಲಕ ಗಮನ ಸೆಳೆದರು
ಭದ್ರಾವತಿ, ಏ. ೨೨: ಮುಸ್ಲಿಂ ಸಮುದಾಯದವರು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಸಂಭ್ರಮ ಹಂಚಿಕೆ ಕೊಂಡರು.
ತರೀಕೆರೆ ರಸ್ತೆಯಲ್ಲಿರುವ ಹಜರತ್ ಸೈಯದ್ ಸಾದಾತ್ ಈದ್ಗಾ ಮೈದಾನದಲ್ಲಿ ಬೆಳಿಗ್ಗೆಯೇ ಮುಸ್ಲಿಂ ಸಮುದಾಯದ ಧರ್ಮ ಗುರುಗಳು, ವಿವಿಧ ಮಸೀದಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವಿಶೇಷವಾಗಿ ಈ ಬಾರಿ ಕ್ರೈಸ್ತ ಸಮಾಜದವರು ಈದ್ಗಾ ಮೈದಾನಕ್ಕೆ ತೆರಳಿ ಹಬ್ಬದ ಶುಭಾಶಯ ಕೋರುವ ಮೂಲಕ ಗಮನ ಸೆಳೆದರು. ಈ ಸಂದರ್ಭದಲ್ಲಿ ಕ್ರೈಸ್ತ ಧರ್ಮಗುರು ಫಾದರ್ ಸಾಜಿಶ್, ಅಂತೋನಿ ವಿಲ್ಸನ್, ಎನ್.ಪಿ ಡೇವಿಸ್, ಎನ್.ಪಿ ಜೋಸೆಫ್, ಆಂತೋಣಿ, ಟಿ.ವಿ ಜೋಸೆಫ್ ಸೇರಿದಂತೆ ಇನ್ನಿತರ ಕ್ರೈಸ್ತ ಮುಖಂಡರು ಉಪಸ್ಥಿತರಿದ್ದರು.
ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸಹ ಈದ್ಗಾ ಮೈದಾನಕ್ಕೆ ತೆರಳಿ ಹಬ್ಬದ ಶುಭಾಶಯ ಕೋರಿದರು.
No comments:
Post a Comment