ದಿವ್ಯರಾಜ್
ಭದ್ರಾವತಿ, ಏ. ೧೨ : ನಗರದ ವೇಲೂರು ಶೆಡ್ ನಿವಾಸಿ, ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ದಿವ್ಯರಾಜ್(೩೭) ಮಂಗಳವಾರ ಶಿವಮೊಗ್ಗದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪತ್ನಿ, ಓರ್ವ ಪುತ್ರ ಇದ್ದರು. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ಬುಧವಾರ ಸಂಜೆ ನೆರವೇರಿತು. ದಿವ್ಯರಾಜ್ ಜಯಕರ್ನಾಟಕ, ಕೇಸರಿ ಪಡೆ ಹಾಗು ಕನ್ನಡಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಜಯಕರ್ನಾಟಕ, ಕೇಸಪಡೆ ಸೇರಿದಂತೆ ವಿವಿಧ ಸಂಘಟನೆಗಳು ಸಂತಪಾ ಸೂಚಿಸಿವೆ.
No comments:
Post a Comment