ಶನಿವಾರ, ಏಪ್ರಿಲ್ 29, 2023

ಏ.೩೦ರಂದು ಶ್ರೀ ಶ್ರೀನಿವಾಸ ಸ್ವಾಮಿಯ ಕಲ್ಯಾಣೋತ್ಸವ


    ಭದ್ರಾವತಿ, ಏ. ೨೯: ಮಿಲ್ಟ್ರಿಕ್ಯಾಂಪ್ ಬೈಪಾಸ್ ರಸ್ತೆ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಏ.೩೦ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಶ್ರೀನಿವಾಸ ಸ್ವಾಮಿಯ ಕಲ್ಯಾಣೋತ್ಸವ ಏರ್ಪಡಿಸಲಾಗಿದೆ.
    ಮಧ್ಯಾಹ್ನ ೧೨.೩೦ಕ್ಕೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಹಾಗು ಸ್ವಾಮಿಯ ಕಲ್ಯಾಣೋತ್ಸವದ ಕಂಕಣ ದೊರೆಯುತ್ತದೆ(ವಿವಾಹ ಪ್ರತಿಬಂಧಕರ ದೋಷದ ನಿವಾರಣೆಗೋಸ್ಕರ). ಹೆಚ್ಚಿನ ಮಾಹಿತಿಗೆ ಮೊ: ೯೮೪೫೫೪೬೨೧೧/೬೩೬೨೭೧೧೭೬೬  ಸಂಪರ್ಕಿಸಬಹುದಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಲ್ಯಾಣೋತ್ಸವ ಯಶಸ್ವಿಗೊಳಿಸಲು ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ