Tuesday, April 25, 2023

ಡಾ. ವಿಜಯದೇವಿಗೆ ‘ಅಕ್ಕಮಹಾದೇವಿ ಪ್ರಶಸ್ತಿ’

ಭದ್ರಾವತಿ ನಿವಾಸಿ, ವಿಜಯಪುರ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ, ಎಮೆರಿಟಸ್ ಪ್ರೊಫೆಸರ್ ಡಾ. ವಿಜಯದೇವಿಯವರಿಗೆ 'ಅಕ್ಕಮಹಾದೇವಿ ಪ್ರಶಸ್ತಿ' ನೀಡಿ ಗೌರವಿಸಲಾಗಿದೆ.
    ಭದ್ರಾವತಿ, ಏ. ೨೫ : ನಗರದ ನಿವಾಸಿ, ವಿಜಯಪುರ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ, ಎಮೆರಿಟಸ್ ಪ್ರೊಫೆಸರ್ ಡಾ. ವಿಜಯದೇವಿಯವರಿಗೆ 'ಅಕ್ಕಮಹಾದೇವಿ ಪ್ರಶಸ್ತಿ' ನೀಡಿ ಗೌರವಿಸಲಾಗಿದೆ.
    ಡಾ. ವಿಜಯದೇವಿಯವರ ಸಾಹಿತ್ಯ ಹಾಗು ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರಿನ ಜೋಳನಾಯಕನಹಳ್ಳಿಯ ಸುಮಂಗಲಿ ಸೇವಾ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
  ಡಾ. ವಿಜಯದೇವಿಯವರು ಹಲವು ಪುಸ್ತಕಗಳನ್ನು ಹೊರತಂದಿದ್ದು, ಅಲ್ಲದೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇವರನ್ನು ನಗರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.
    ಏ.೨೬ರಂದು ಉಪನ್ಯಾಸ:
    ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ, ಕಲಬುರಗಿ, ಬಸವಪರ ಸಂಘಟನೆಗಳು ಹಾಗು ಕಾಯಕ ಶರಣರ ಒಕ್ಕೂಟ ಕಲಬುರಗಿ ವತಿಯಿಂದ ಏ.೨೮ರ ವರೆಗೆ ಕಲಬುರಗಿ ಜಗತ್, ಬಸವೇಶ್ವರ ವೃತ್ತದ ಬಸವ ಸಾಂಸ್ಕೃತಿಕ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿರುವ ಬಸವ ಜಯಂತಿ ಉತ್ಸವದಲ್ಲಿ ಏ.೨೬ರ ಸಂಜೆ ೬ ಗಂಟೆಗೆ ಬಸವಣ್ಣ, ಮಹಿಳೆ ಮತ್ತು ಸಂವಿಧಾನ್ಮಕ ಚಿಂತನೆಗಳು ಕುರಿತು ಡಾ. ವಿಜಯದೇವಿ ಉಪನ್ಯಾಸ ನೀಡಲಿದ್ದಾರೆ.

No comments:

Post a Comment