Sunday, April 23, 2023

ಶಾಸಕ ಸಂಗಮೇಶ್ವರ್ ಗೆಲುವಿಗೆ ತಮಿಳುನಾಡಿನ ಕ್ರೈಸ್ತ ದೇವಾಲಯದಲ್ಲಿ ಪ್ರಾರ್ಥನೆ

ತಮಿಳುನಾಡಿನ ವೆಳ್ಳಾಂಗಣಿ ಮಾತೆ ದೇವಾಲಯದಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಗೆಲುವು ಸಾಧಿಸುವಂತೆ ಪ್ರಾರ್ಥಿಸಲಾಯಿತು. 
    ಭದ್ರಾವತಿ, ಏ. ೨೩ : ತಮಿಳುನಾಡಿನ ವೆಳ್ಳಾಂಗಣಿ ಮಾತೆ ದೇವಾಲಯದಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಗೆಲುವು ಸಾಧಿಸುವಂತೆ ಪ್ರಾರ್ಥಿಸಲಾಯಿತು.
    ಕ್ರೈಸ್ತರ ಪುಣ್ಯ ಕ್ಷೇತ್ರವಾಗಿರುವ ವೆಳ್ಳಾಂಗಣಿ ಮಾತೆ ದೇವಾಲಯದಲ್ಲಿ ಮಾಜಿ ನಗರಸಭಾ ಸದಸ್ಯ ಪ್ರಾನ್ಸಿಸ್ ಮತ್ತು ಕುಟುಂಬ ವರ್ಗದವರು ಪ್ರಾರ್ಥನೆ ಸಲ್ಲಿಸಿದ್ದು, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಗೆಲುವು ಸಾಧಿಸುವ ಮೂಲಕ ಸಚಿವರಾಗಿ ಕ್ಷೇತ್ರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಪಡಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.
    ಪ್ರಾನ್ಸಿಸ್ ಶಾಸಕ ಬಿ.ಕೆ ಸಂಗಮೇಶ್ವರ್ ಅಭಿಯಾನಿಯಾಗಿದ್ದು, ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಹಾಗು ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ನಗರಸಭೆಯಲ್ಲಿ ನಾಮನಿರ್ದೇಶನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

No comments:

Post a Comment