Monday, May 8, 2023

ಕಡ್ಡಾಯ ಮತದಾನ ಜಾಗೃತಿ ಅಭಿಯಾನ : ಬೀದಿ ನಾಟಕ, ಕರಪತ್ರ ವಿತರಣೆ

ಅಪ್ಪರ್ ಹುತ್ತಾ ಗೆಳೆಯರ ಬಳಗದಿಂದ ವಿಶೇಷ ಕಾರ್ಯಕ್ರಮ

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿ ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ವಿಶೇಷವಾಗಿ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅಪ್ಪರ್ ಹುತ್ತಾ ಸೇರಿದಂತೆ ವಿವಿಧೆಡೆ ತೆರಳಿ ಕರಪತ್ರಗಳನ್ನು ವಿತರಿಸಿ, ಬೀದಿ ನಾಟಕ ಆಯೋಜಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.
    ಭದ್ರಾವತಿ, ಮೇ. ೮ :  ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ವಿಶೇಷವಾಗಿ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅಪ್ಪರ್ ಹುತ್ತಾ ಸೇರಿದಂತೆ ವಿವಿಧೆಡೆ ತೆರಳಿ ಕರಪತ್ರಗಳನ್ನು ವಿತರಿಸಿ, ಬೀದಿ ನಾಟಕ ಆಯೋಜಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.
    ಮತದಾನ ಪ್ರತಿಯೊಬ್ಬರ ಸಂವಿಧಾನ ಬದ್ಧ ಹಕ್ಕು. ಪ್ರತಿಯೊಬ್ಬ ಮತದಾರ ತಮ್ಮ ಮತವನ್ನು ಯಾವುದೇ ಆಮಿಷಗಳಿಗೆ ಒಳಗಾಗದೆ  ಕಡ್ಡಾಯವಾಗಿ ಮತ ಚಲಾಯಿಸುವಂತೆ  ಪ್ರೇರೇಪಿಸುವ ಉದ್ದೇಶದಿಂದ ಟ್ರಸ್ಟ್ ಕೆಲವು ದಿನಗಳಿಂದ ಅಭಿಯಾನ ಹಮ್ಮಿಕೊಂಡಿದೆ.
    ವಿಶೇಷವಾಗಿ ಮೇ.೭ರ ಸಂಜೆ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ, ಗೋಲ್ಡನ್ ಜ್ಯೂಬಿಲಿ ಉದ್ಯಾನವನದ ಬಳಿ, ಅಪ್ಪರ್ ಹುತ್ತಾ ಶ್ರೀ ನಂದಿ ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನದ ಬಳಿ  ಮತ್ತು ಕೇಶವರಾವ್ ವೃತ್ತದ ಬಳಿ ಬೀದಿ ನಾಟಕ ಆಯೋಜಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಟ್ರಸ್ಟ್ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಕಲಾವಿದರು ಪಾಲ್ಗೊಂಡಿದ್ದರು.

No comments:

Post a Comment