ಮೇ.೫ರ ಮಧ್ಯಾಹ್ನದೊಳಗೆ ಹೆಸರು ನೋಂದಾಯಿಸಿ
ಭದ್ರಾವತಿ, ಮೇ. ೪ : ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ವತಿಯಿಂದ ಮೇ.೬ರಂದು ಬೆಳಿಗ್ಗೆ ೧೧.೧೫ ರಿಂದ ೧೨.೩೦ರವರೆಗೆ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಮತದಾನ ಜಾಗೃತಿ ಮತ್ತು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವುದು. ನಿವೃತ್ತ ಕಾರ್ಮಿಕರಿಗೆ ಬರಬೇಕಾಗಿರುವ ಲಕ್ಷಾಂತರ ರು. ಬಾಕಿ ಹಣ ಕೊಡಿಸುವ ಕುರಿತು ಮತ್ತು ಕಾರ್ಖಾನೆಯನ್ನು ಮುಚ್ಚುವ ಸ್ಥಿತಿಗೆ ತಂದು ಈಗಲೂ ಭ್ರಷ್ಟಾಚಾರದೊಂದಿಗೆ ಹಿಂಬಾಗಿಲಿಂದ ಅಧಿಕಾರದ ಚುಕ್ಕಾಣಿ ಹೊತ್ತಿರುವವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಸ್ಪಷ್ಟ ನಿಲುವು ಹಾಗು ಮುಂದಿನ ನಡೆಯ ಬಗ್ಗೆ ಸಂವಾದದಲ್ಲಿ ಚರ್ಚಿಸುವ ಅವಕಾಶ ಒದಗಿ ಬಂದಿದೆ. ಈ ಅವಕಾಶ ಕ್ಷೇತ್ರದ ಮತದಾರರಾದ ಕಾರ್ಮಿಕರು ಸದುಪಯೋಗಪಡಿಸಿಕೊಳ್ಳುವುದು.
ಸಂವಾದದಲ್ಲಿ ಪಾಲ್ಗೊಳ್ಳಲು ಇಚ್ಛೆ ಇರುವ ಕಾರ್ಮಿಕರು ಮೇ.೫ರ ಮಧ್ಯಾಹ್ನ ೧೨ ಗಂಟೆಯೊಳಗಾಗಿ ತಿಳಿಸುವುದು. ಹೆಸರು ನೋಂದಾಯಿಸಿದವರು ಮಾತ್ರ ಸಂವಾದದಲ್ಲಿ ಭಾಗವಹಿಸಬಹುದಾಗಿದೆ. ಒಬ್ಬ ಅಭ್ಯರ್ಥಿಯೊಂದಿಗೆ ಅವರ ಅನುಯಾಯಿಗಳಲ್ಲಿ ಕೇವಲ ಒಬ್ಬರಿಗೆ ಮಾತ್ರ ಪ್ರವೇಶವಿರುತ್ತದೆ. ಮೊತ್ತಮೊದಲ ಬಾರಿಗೆ ಎಲ್ಲಾ ಅಭ್ಯರ್ಥಿಗಳನ್ನು ಒಂದೇ ವೇದಿಕೆಯ ಮೇಲೆ ಕೂರಿಸುವ ಮೂಲಕ ಕ್ಷೇತ್ರದ ಒಗ್ಗಟ್ಟನ್ನು ಪ್ರದರ್ಶಿಸುವುದು ನಮ್ಮ ಉದ್ದೇಶವಾಗಿದೆ. ವೇದಿಕೆಯಲ್ಲಿ ವೈಯಕ್ತಿಕ ನಿಂದನೆ ಮತ್ತು ಗಲಾಟೆಗಳಿಗೆ ಆಸ್ಪದ ನೀಡದಂತೆ ಸಹಕರಿಸುವುದು. ಹೆಚ್ಚಿನ ಮಾಹಿತಿಗೆ ಮೊ: ೯೪೮೧೪೯೩೯೮೩ ಸಂಖ್ಯೆಗೆ ಕರೆಮಾಡಬಹುದಾಗಿದೆ ಎಂದು ವೇದಿಕೆ ಪ್ರಧಾನ ಸಂಚಾಲಕ ಟಿ.ಜಿ ಬಸವರಾಜಯ್ಯ ತಿಳಿಸಿದ್ದಾರೆ.
No comments:
Post a Comment