Wednesday, May 10, 2023

ಅಭ್ಯರ್ಥಿಗಳಿಂದ ಕೃತಜ್ಞತೆ


ಭದ್ರಾವತಿ, ಮೇ. ೧೦ : ಈ ಬಾರಿ ವಿಧಾನಸಭಾ ಚುನಾವಣೆ ಮತದಾನದಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಿದ ಮತದಾರರಿಗೆ ಹಾಗು ಚುನಾವಣೆಯಲ್ಲಿ ಶ್ರಮಿಸಿರುವ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಹಾಗು ಅಭಿಮಾನಿಗಳಿಗೆ ಅಭ್ಯರ್ಥಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ, ಕಾಂಗ್ರೆಸ್ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್ ಕ್ಷೇತ್ರದ ಸಮಸ್ತ ಮತದಾರರಿಗೆ ಹಾಗು ಮತದಾನ ಶಾಂತಿಯುತವಾಗಿ ಮುಕ್ತಾಯಗೊಳ್ಳಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

No comments:

Post a Comment