ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕ್ಷೇತ್ರದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಂದೋಲನವಾಗಿ ಮಾರ್ಪಟ್ಟಿದೆ.
ಭದ್ರಾವತಿ, ಮೇ. ೨೧ : ಶಾಸಕ ಬಿ.ಕೆ ಸಂಗಮೇಶ್ವರ್ಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕ್ಷೇತ್ರದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಂದೋಲನವಾಗಿ ಮಾರ್ಪಟ್ಟಿದೆ.
ಶ್ರೀ ಬಿ.ಕೆ ಸಂಗಮೇಶ್ವರ್ರವರು ಮಿನಿಸ್ಟರ್ ಪಟ್ಟ ಏರಲೇಬೇಕು... ಎಂಬ ಶೀರ್ಷಿಕೆಯೊಂದಿಗೆ ಅಂದೋಲನ ನಡೆಯುತ್ತಿದ್ದು, ಭದ್ರಾವತಿಯಲ್ಲಿ ೪ನೇ ಬಾರಿ ಗೆದ್ದು ಶಾಸಕರಾಗಿ ಆಯ್ಕೆಯಾದ ನಮ್ಮ ಶ್ರೀ ಬಿ.ಕೆ ಸಂಗಮೇಶ್ವರ್ ಅವರನ್ನು ಮಿನಿಸ್ಟರ್ ಮಾಡದೆ ಇನ್ಯಾರನ್ನ ಮಾಡುತ್ತೀರಾ..? ಎಂಬ ಅಂದೋಲನದಲ್ಲಿ ಆರಂಭಿಸಿದ್ದಾರೆ.
ಈಗಾಗಲೇ ಪಕ್ಷದ ಸ್ಥಳೀಯ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಮಾತ್ರವಲ್ಲದೆ ಪಕ್ಷಭೇದ ಮರೆತು ವಿವಿಧ ಸಮುದಾಯಗಳು, ಸಂಘ-ಸಂಸ್ಥೆಗಳು, ಗಣ್ಯರು ಸಹ ಸಂಗಮೇಶ್ವರ್ಗೆ ಸಚಿವ ಸ್ಥಾನ ನೀಡಬೇಕೆಂದು ಒಕ್ಕೂರಲಿನಿಂದ ಆಗ್ರಹಿಸಿದ್ದಾರೆ.
ಒಂದು ವೇಳೆ ಸಚಿವ ಸ್ಥಾನ ನೀಡಲು ವಿಳಂಬ ಮಾಡಿದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ಸಹ ಕೇಳಿ ಬರುತ್ತಿದೆ. ಈಗಾಗಲೇ ಶಾಸಕ ಬಿ.ಕೆ ಸಂಗಮೇಶ್ವರ್ರವರು ಸರ್ಕಾರ ರಚನೆ ಆರಂಭದಲ್ಲಿಯೇ ಸಚಿವ ಸ್ಥಾನ ಸಿಗದಿರುವ ಕುರಿತು ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
No comments:
Post a Comment