Thursday, May 18, 2023

ಸಿದ್ದರಾಮಯ್ಯ ೨ನೇ ಬಾರಿಗೆ ಮುಖ್ಯಮಂತ್ರಿ : ವೈ. ನಟರಾಜ್ ಸಂತಸ

ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವರಾಗಲಿ ಶಬರಿಮಲೆಯಲ್ಲಿ ಪ್ರಾರ್ಥನೆ

ಭದ್ರಾವತಿ ಶ್ರೀ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೈ. ನಟರಾಜ್ ವೈ. ನಟರಾಜ್‌ರವರು ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ  ಶಬರಿಮಲೆ ಪ್ರವಾಸ ಕೈಗೊಂಡು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಹಾಗು ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್‌ರವರು ಸಚಿವರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
    ಭದ್ರಾವತಿ, ಮೇ. ೧೮ : ರಾಜ್ಯದ ಮುಖ್ಯಮಂತ್ರಿಯಾಗಿ ೨ನೇ ಬಾರಿಗೆ ಪದಗ್ರಹಣ ಸ್ವೀಕರಿಸುತ್ತಿರುವ ಹಿರಿಯ ರಾಜಕೀಯ ಮುತ್ಸದ್ದಿ ಸಿದ್ದರಾಮಯ್ಯನವರಿಗೆ ಶ್ರೀ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೈ. ನಟರಾಜ್ ಸಂತಸ ವ್ಯಕ್ತಪಡಿಸಿದ್ದಾರೆ.
    ಸಿದ್ದರಾಮಯ್ಯನವರು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಪ್ರಮುಖ ಕಾರಣಕರ್ತರಲ್ಲಿ ಒಬ್ಬರಾಗಿದ್ದು, ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಬಾರಿ ಸಹ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ವೈ. ನಟರಾಜ್‌ರವರು ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ  ಶಬರಿಮಲೆ ಪ್ರವಾಸ ಕೈಗೊಂಡು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಹಾಗು ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್‌ರವರು ಸಚಿವರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
    ಸಿದ್ದರಾಮಯ್ಯನವರು ಮೇ.೨೦ರಂದು ಪದಗ್ರಹಣ ಸ್ವೀಕರಿಸುತ್ತಿದ್ದು, ಬಿ.ಕೆ ಸಂಗಮೇಶ್ವರ್‌ರವರು ಸಹ ಅಂದು ಸಚಿವರಾಗಿ ಪದಗ್ರಹಣ ಸ್ವೀಕರಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.

No comments:

Post a Comment