Monday, May 8, 2023

ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಬೃಹತ್ ರೋಡ್ ಶೋ


ಭದ್ರಾವತಿ, ಮೇ. ೮: ಮತದಾನ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ನಗರದ ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ಬೃಹತ್ ರೋಡ್ ಶೋ ನಡೆಸಿದರು.
ಒಂದೆಡೆ ಬಿಜೆಪಿ, ಮತ್ತೊಂದೆಡೆ ಕಾಂಗ್ರೆಸ್ ಪಕ್ಷಗಳು ರೋಡ್ ಶೋ ನಡೆಸಿವೆ. ಶಾರದ ಅಪ್ಪಾಜಿ ಸಹ ಈ ಎರಡೂ ಪಕ್ಷಗಳಿಗೂ ಸೆಡ್ಡು ಹೊಡೆಯುವಂತೆ ರೋಡ್ ಶೋ ನಡೆಸಿ ಗಮನ ಸೆಳೆದರು.
ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ಹೊಸಮನೆ ಶಿವಾಜಿ ವೃತ್ತ ತಲುಪಿ ನಂತರ ತರೀಕೆರೆ ಗಾಂಧಿವೃತ್ತದವರೆಗೂ ರೋಡ್ ಶೋ ನಡೆಯಿತು. ಪಕ್ಷದ ಪ್ರಮುಖರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
ಈಗಾಗಲೇ ಗ್ರಾಮಾಂತರ ಹಾಗು ನಗರ ಭಾಗದಲ್ಲಿ ಜೆಡಿಎಸ್ ಪಕ್ಷದಿಂದ ವ್ಯಾಪಕ ಪ್ರಚಾರ ನಡೆಸಲಾಗಿದೆ. ಮನೆ ಮನೆ ಪ್ರಚಾರ ಬಾಕಿ ಉಳಿದಿದ್ದು, ಪಕ್ಷದ ಅಭ್ಯರ್ಥಿ, ಮುಖಂಡರು, ಕಾರ್ಯಕರ್ತರು ಮತದಾರರನ್ನು ಯಾವ ರೀತಿ ಸೆಳೆಯುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.


ಮತದಾನ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಭದ್ರಾವತಿಯಲ್ಲಿ ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ನಗರದ ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ಬೃಹತ್ ರೋಡ್ ಶೋ ನಡೆಸಿದರು.

No comments:

Post a Comment