Friday, May 5, 2023

ಚುನಾವಣೆಯಲ್ಲಿ ಹಣ, ಹೆಂಡ, ಅಮಿಷಗಳಿಗೆ ಬಲಿಯಾಗಿ ಮತ ಮಾರಿಕೊಳ್ಳದಿರಿ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಜಾಗೃತಿ ಕರಪತ್ರ ವಿತರಣೆಗೆ ಚಾಲನೆ

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಶಾಖೆವತಿಯಿಂದ ಶುಕ್ರವಾರ ಜಾಗೃತಿ ಕರಪತ್ರ ವಿತರಣೆಗೆ ಚಾಲನೆ ನೀಡಲಾಯಿತು.
    ಭದ್ರಾವತಿ, ಮೇ. ೫ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಭವಿಷ್ಯದ ಚಿಂತನೆಗಳೊಂದಿಗೆ ಮಾದರಿ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಹಲವಾರು ವರ್ಷಗಳಿಂದ ಮತದಾನ ಜಾಗೃತಿ ನಡೆಯುತ್ತಿದ್ದು, ಪ್ರಸ್ತುತ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಶಾಖೆ ವತಿಯಿಂದ ಮುಗ್ದ ಮತದಾರರು ಹಣ, ಹೆಂಡದ ಅಮಿಷಗಳಿಗೆ ಬಲಿಯಾಗದಂತೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಲಾಗುತ್ತಿದೆ.
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-೨ರ ಕಛೇರಿ ವತಿಯಿಂದ ಶುಕ್ರವಾರ ಕರಪತ್ರಗಳ ವಿತರಣೆಗೆ ಚಾಲನೆ ನೀಡಲಾಯಿತು. ಮೇ. ೧೦ರಂದು ಚುನಾವಣೆ ನಡೆಯಲಿದ್ದು, ಮುಗ್ದ ಮತದಾರರಿಗೆ ಮದ್ಯ ಕುಡಿಸಿ, ಹಣ ಅಥವಾ ಅಮಿಷಗಳಿಂದ  ಮತ ಪಡೆಯುವ ಪ್ರಯತ್ನಗಳು ನಡೆಯಬಹುದು. ಇದನ್ನು ಎಲ್ಲರೂ ಒಗ್ಗಟ್ಟಾಗಿ ವಿರೋಧಿಸಬೇಕು. ರಾಜಕೀಯ ಪಕ್ಷಗಳು ಹಣ, ಮದ್ಯ ಹಂಚುವುದಿಲ್ಲ ಎನ್ನುವ ತೀರ್ಮಾನಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯ ನಡೆಯುತ್ತಿದೆ.
    ಜನಜಾಗೃತಿ ವೇದಿಕೆ ಸದಸ್ಯರಾದ ಜಿ. ಆನಂದ ಕುಮಾರ್, ಪಾಲಾಕ್ಷಪ್ಪ, ರಾಜೇಶ್, ರೇವಣಕರ್ ಹಾಗೂ ನವಜೀವನ ಸಮಿತಿ ಸದಸ್ಯರುಗಳು, ಯೋಜನಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.

No comments:

Post a Comment