Sunday, May 28, 2023

ಸರ್ಕಾರಿ ಐಟಿಐ ವಿದ್ಯಾರ್ಥಿಗಳಿಗೆ ಕಾನೂನು ಅರಿವು, ಜಾಗೃತಿ ಕಾರ್ಯಕ್ರಮ

ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ವತಿಯಿಂದ ಬಿ.ಎಚ್ ರಸ್ತೆ, ಕಡದಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
    ಭದ್ರಾವತಿ, ಮೇ. ೨೮ : ನಗರದ ನ್ಯೂಟೌನ್ ಪೊಲೀಸ್ ಠಾಣೆ ವತಿಯಿಂದ ಬಿ.ಎಚ್ ರಸ್ತೆ, ಕಡದಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
    ಪ್ರೊಬೆಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ, ಸಂಚಾರಿ ನಿಯಮ ಪಾಲನೆ ಮತ್ತು ರಸ್ತೆ ಸುರಕ್ಷತೆ, ಇಆರ್‌ಎಸ್‌ಎಸ್-೧೧೨ ಸಹಾಯವಾಣಿ ಮತ್ತು ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ನೀಡಲಾಯಿತು.
    ನಗರ ಪೊಲೀಸ್ ವೃತ್ತ ನಿರೀಕ್ಷಕ ಬಿ.ಪಿ ಶಾಂತಿನಾಥ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಭಾರತಿ ಅನಿಲ್, ಕೈಗಾರಿಕಾ ತರಬೇತಿ ಸಂಸ್ಥೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment