ಮೇ.೫ರಂದು ಮಧ್ಯಾಹ್ನ ಬ್ರಹ್ಮರಥೋತ್ಸವ ೮ರಂದು ಸಂಪನ್ನ
ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮೇ.೮ರವರೆಗೆ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವ ನಡೆಯಲಿದ್ದು, ಗುರುವಾರ ಬೆಳಿಗ್ಗೆ ಶ್ರೀ ನರಸಿಂಹ ಜಯಂತಿ ಉತ್ಸವ ನಡೆಯಿತು.
ಭದ್ರಾವತಿ, ಮೇ. ೪ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರ ಪಾಲಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮೇ.೮ರವರೆಗೆ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವ ನಡೆಯಲಿದ್ದು, ಗುರುವಾರ ಬೆಳಿಗ್ಗೆ ಶ್ರೀ ನರಸಿಂಹ ಜಯಂತಿ ಉತ್ಸವ ನಡೆಯಿತು.
ನರಸಿಂಹ ಜಯಂತಿ ಉತ್ಸವ ಅಂಗವಾಗಿ ವಸಂತಸೇವೆ, ಅಷ್ಟಾವಧಾನ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಸಂಜೆ ಕಲ್ಯಾಣೋತ್ಸವ ವಿಜೃಂಭಣೆಯಿಂದ ನೆರವೇರಿತು.
ಆಡಳಿತಾಧಿಕಾರಿ ಎ.ಟಿ ಬಸವರಾಜ್, ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಎಸ್. ರಂಗನಾಥ ಶರ್ಮ, ಸಹಾಯಕ ಅರ್ಚಕ ಎಸ್. ಶ್ರೀನಿವಾಸ್, ಹರಿ, ಅಭಿನಂದನ್, ಕೃಷ್ಣಪ್ಪ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಮೇ.೫ರಂದು ಬ್ರಹ್ಮರಥೋತ್ಸವ :
ಪ್ರತಿವರ್ಷದಂತೆ ಈ ಬಾರಿ ಸಹ ಮೇ.೫ರಂದು ಮಧ್ಯಾಹ್ನ ಅಭಿಜಿನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
೬ರಂದು ಬೆಳಿಗ್ಗೆ ಗಜವಾಹನೋತ್ಸವ, ಸಂಜೆ ಶೇಷವಾಹನೋತ್ಸವ, ೭ರಂದು ಸಂಜೆ ಹನುಮಂತೋತ್ಸವ, ಪೂರ್ಣಾಹುತಿ ಹಾಗು ೮ರಂದು ಬೆಳಿಗ್ಗೆ ಮಹಾಭಿಷೇಕ, ಸಂಜೆ ಪಲ್ಲಕ್ಕಿ ಉತ್ಸವ ನಡೆಯಲಿದೆ.
No comments:
Post a Comment