ಭದ್ರಾವತಿ ನ್ಯೂಟೌನ್ ವಿಐಎಸ್ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೩ನೇ ವರ್ಷದ ಕರಗ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಭದ್ರಾವತಿ, ಮೇ. ೨೮: ನ್ಯೂಟೌನ್ ವಿಐಎಸ್ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೩ನೇ ವರ್ಷದ ಕರಗ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಬೆಳಿಗ್ಗೆ ಅಮ್ಮನವರಿಗೆ ಎಳನೀರು ಅಭಿಷೇಕ, ನಂತರ ಪಂಚಾಮೃತ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಬುಳ್ಳಾಪುರ ಚಾನಲ್ ಬಳಿ ಶಕ್ತಿ ಕರಗ ಸ್ಥಾಪನೆ ಮಾಡಿ ನಾದಸ್ವರ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ಮಧ್ಯಾಹ್ನ ೩ ಗಂಟೆಗೆ ಅಮ್ಮನವರ ದೇವಸ್ಥಾನಕ್ಕೆ ತರಲಾಯಿತು. ನಂತರ ಮಹಾಮಂಗಳಾರತಿಯೊಂದಿಗೆ ತೀರ್ಥಪ್ರಸಾದ ವಿನಿಯೊಗ ಹಾಗು ಶ್ರಿ ದೇವಿಗೆ ಅಂಬಲಿ ಮತ್ತು ಅನ್ನದಾನ ಸಂತರ್ಪಣೆ ನಡೆಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ವಿಜಯ್ಕುಮಾರ್ ಶಕ್ತಿ ಕರಗ ಹೊತ್ತು ತರುವ ಮೂಲಕ ಸೇವೆ ಸಮರ್ಪಿಸಿದರು. ನ್ಯೂಟೌನ್, ನ್ಯೂಕಾಲೋನಿ, ಕೂಲಿಬ್ಲಾಕ್ ಶೆಡ್ ಆಂಜನೇಯ ಅಗ್ರಹಾರ, ವಿದ್ಯಾಮಂದಿರ, ಜನ್ನಾಪುರ ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.
ದೇವಸ್ಥಾನ ಸಮಿತಿ ಅಧ್ಯಕ್ಷ ಕುಪ್ಪಸ್ವಾಮಿ ನೇತೃತ್ವವಹಿಸಿದ್ದರು. ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಸೇವಾಕರ್ತರು, ದೇವಸ್ಥಾನದ ಪ್ರಧಾನ ಅರ್ಚಕ ಕಾಶಿನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment