Friday, May 19, 2023

ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಭದ್ರಾವತಿ ಕ್ಷೇತ್ರದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಲಭಿಸಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಭರವಸೆ ನೀಡಿರುವಂತೆ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ನೀಡಲೇಬೇಕೆಂದು ಸಂಗೊಳ್ಳಿ ರಾಯಣ್ಣ ಯುವಪಡೆ ಪ್ರಮುಖರು ಆಗ್ರಹಿಸಿದರು.
    ಭದ್ರಾವತಿ, ಮೇ. ೧೯: ಕ್ಷೇತ್ರದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಲಭಿಸಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಭರವಸೆ ನೀಡಿರುವಂತೆ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ನೀಡಲೇಬೇಕೆಂದು ಸಂಗೊಳ್ಳಿ ರಾಯಣ್ಣ ಯುವಪಡೆ ಪ್ರಮುಖರು ಆಗ್ರಹಿಸಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾಜದ ನಾಯಕರು ಹಾಗು ರಾಜಕೀಯ ಮುತ್ಸದ್ದಿಯಾಗಿರುವ ಸಿದ್ದರಾಮಯ್ಯನವರು ಶನಿವಾರ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.
    ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್‌ರವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು. ವಿಐಎಸ್‌ಎಲ್ ಮತ್ತು ಎಂಪಿಎಂ ಎರಡೂ ಕಾರ್ಖಾನೆಗಳು ಅಭಿವೃದ್ಧಿಯಾಗಬೇಕು. ಈಗಾಗಲೇ ಸಂಗಮೇಶ್ವರ್‌ರವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಎಂಪಿಎಂ ಕಾರ್ಖಾನೆ ಪುನರ್ ಆರಂಭಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಯುವಪಡೆ ಪ್ರಮುಖರಾದ ದೊಡ್ಮನೆ ನಾಗಭೂಷಣ್, ಅಭಿಲಾಷ್, ಎಚ್. ರವಿಕುಮಾರ್, ನಗರಸಭಾ ಸದಸ್ಯರಾದ ಕಾಂತರಾಜ್, ಆರ್. ಶ್ರೇಯಸ್, ಶಿವಣ್ಣಗೌಡ, ಸುನಿಲ್‌ಕುಮಾರ್, ಶ್ರೀನಿವಾಸ್, ಗೋಪಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment