Friday, May 19, 2023

ಭದ್ರಾವತಿ ಕ್ಷೇತ್ರದ ಸರ್ವತೋಮುಖ ಅಭಿವೃದಿಗೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಿ

ಭದ್ರಾವತಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಿನ್ನಲೆಯಲ್ಲಿ ಈ ಬಾರಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
     ಭದ್ರಾವತಿ, ಮೇ. ೧೯ : ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಿನ್ನಲೆಯಲ್ಲಿ ಈ ಬಾರಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
    ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಗಳ ಪ್ರಮುಖರು, ವೀರಶೈವ ಲಿಂಗಾಯತ ಸಮಾಜ ರಾಜಕೀಯವಾಗಿ ಸಮನ್ವಯತೆ ಕಾಯ್ದುಕೊಂಡು ಬರುತ್ತಿದೆ. ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷಗಳಲ್ಲೂ ಸಮಾಜದವರು ಗುರುತಿಸಿಕೊಂಡಿದ್ದು, ಚುನಾವಣೆ ನಂತರ ನಾವೆಲ್ಲರೂ ಒಗ್ಗಟ್ಟಿನಿಂದ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಚಿಂತಿಸುವ ಮನೋಭಾವನೆ ಹೊಂದಿದ್ದೇವೆ. ಸಮಾಜದ ಬಿ.ಕೆ ಸಂಗಮೇಶ್ವರ್‌ರವರು ೪ನೇ ಬಾರಿಗೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ಸಂಗಮೇಶ್ವರ್‌ರವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದಾರೆ. ವಿಶೇಷವಾಗಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿದ್ದಾರೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಕೈಗೊಳ್ಳಲು ಸಂಗಮೇಶ್ವರ್ ಸಮರ್ಥರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸುತ್ತೇವೆ ಎಂದರು.
    ಸಮಾಜದ ವಿವಿಧ ಸಂಘಟನೆಗಳ ಪ್ರಮುಖರಾದ ಅಡವೀಶಯ್ಯ, ಜಿ. ಸುರೇಶಯ್ಯ, ಸಿದ್ದಲಿಂಗಯ್ಯ, ಬಸವರಾಜಯ್ಯ, ಸತೀಶ್, ಆರ್. ಮಹೇಶ್‌ಕುಮಾರ್, ಬಸವಂತಪ್ಪ, ಡಾ. ಜಿ.ಎಂ ನಟರಾಜ್, ವಾಗೀಶ್, ಪೂರ್ಣಿಮಾ, ಮಹಾದೇವ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment