Wednesday, May 24, 2023

ಸಂಗಮೇಶ್ವರ್‌ಗೆ ಸಚಿವ ಸ್ಥಾನಕ್ಕೆ ತಮಿಳು ಗೌಂಡರ್ ಸಮಾಜ ಆಗ್ರಹ

ನೀಡದ್ದಲ್ಲಿ 'ಭದ್ರಾವತಿ ಬಂದ್' : ಮಣಿ ಎಎನ್‌ಎಸ್

ಮಣಿ ಎಎನ್‌ಎಸ್
    ಭದ್ರಾವತಿ, ಮೇ. ೨೪: ಕ್ಷೇತ್ರದಲ್ಲಿ ತನ್ನದೇ ಆದ ಪ್ರಭಾವ ಮತ್ತು ಪ್ರತಿಷ್ಠೆ ಕಾಯ್ದುಕೊಳ್ಳುವ ಜೊತೆಗೆ ಪ್ರತಿಯೊಬ್ಬರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಜನರ ಮನಸ್ಸಿನಲ್ಲಿ ಉಳಿದುಕೊಂಡಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ತಮಿಳು ಗೌಂಡರ್ ಸಮಾಜದ ತಾಲೂಕು ಅಧ್ಯಕ್ಷ, ನಗರಸಭಾ ಸದಸ್ಯ ಮಣಿ ಎಎನ್‌ಎಸ್ ಆಗ್ರಹಿಸಿದ್ದಾರೆ.
    ಬಿ.ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಜನರಿಗೆ ಯಾವುದೇ ಸಮಸ್ಯೆ ಎದುರಾದರೂ ಸಹ ತಕ್ಷಣ ಸ್ಪಂದಿಸುವ ಮನೋಭಾವ  ಹೊಂದಿದ್ದಾರೆ. ಧರ್ಮ, ಜಾತಿ-ಭೇದಭಾವ ಮಾಡದೆ ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕ್ಷೇತ್ರದ ಮತದಾರರು ಇವರ ಬಳಿ ಧಾವಿಸುತ್ತಾರೆ. ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿರುವ ಏಕೈಕ ರಾಜಕಾರಣಿ ಸಂಗಮೇಶ್ವರ್ ಎಂಬುದು ಹೆಗ್ಗಳಿಕೆಯಾಗಿದೆ. ಅಲ್ಲದೆ ಇದುವರೆಗೂ ಕ್ಷೇತ್ರದಲ್ಲಿ ಯಾರು ಸಹ ಸಚಿವರಾಗಿಲ್ಲ. ಇವರಿಗೆ ಬಿಟ್ಟು ಬೇರೆಯವರಿಗೆ ಸಚಿವ ಸ್ಥಾನ ನೀಡುವುದು ಸರಿಯಲ್ಲ ಎಂದು  ಮನವರಿಕೆ ಮಾಡಿದ್ದಾರೆ.
    ಕ್ಷೇತ್ರದಲ್ಲಿ ಎಂಪಿಎಂ ಮತ್ತು ವಿಐಎಸ್‌ಎಲ್ ಎರಡೂ ಕಾರ್ಖಾನೆಗಳು ಪುನಶ್ಚೇತನಗೊಳ್ಳಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಬೇಕು. ಕ್ಷೇತ್ರದ ಆರ್ಥಿಕ ಮಟ್ಟ ಹೆಚ್ಚಾಗಬೇಕು. ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಈ ಹಿನ್ನಲೆಯಲ್ಲಿ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.
    ಒಂದು ವೇಳೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ  ತಮಿಳು ಗೌಂಡರ್ ಸಮಾಜದ ವತಿಯಿಂದ ಭದ್ರಾವತಿ ಬಂದ್ ನಡೆಸುವ ಮೂಲಕ ಕ್ಷೇತ್ರದಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.  

No comments:

Post a Comment