Thursday, May 4, 2023

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ : ಸ್ಪಷ್ಟನೆ

ಕೋಡ್ಲುಯಜ್ಞಯ್ಯ
    ಭದ್ರಾವತಿ, ಮೇ. ೪ : ಕನ್ನಡ ಸಾಹಿತ್ಯ ಪರಿಷತ್ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿಲ್ಲ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲುಯಜ್ಞಯ್ಯ ಸ್ಪಷ್ಟಪಡಿಸಿದ್ದಾರೆ.
    ಪರಿಷತ್ ಯಾವುದೇ ಪಕ್ಷದ ಮುಖವಾಣಿಯಲ್ಲ. ಇತ್ತೀಚೆಗೆ ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಯಾವುದೇ ರಾಜಕೀಯ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿಲ್ಲ. ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಉದ್ದೇಶ ನಾನು ಹೊಂದಿಲ್ಲ. ಸುಳ್ಳು ಮಾಹಿತಿಗೆ ಕಿವಿಗೊಡದಂತೆ ಮನವಿ ಮಾಡಿದ್ದಾರೆ.

No comments:

Post a Comment