ಭದ್ರಾವತಿ, ಮೇ. ೮ : ಮನೆಯ ಮುಂಭಾಗ ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳವು ಮಾಡಿರುವ ಘಟನೆ ನಗರಸಭೆ ವ್ಯಾಪ್ತಿಯ ಕಣಕಟ್ಟೆ ಗ್ರಾಮದಲ್ಲಿ ನಡೆದಿದೆ.
ಏ.೩೦ರಂದು ರಾತ್ರಿ ೧೧.೩೦ರ ಸಮಯದಲ್ಲಿ ಹೀರೋ ಸ್ಪ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನ ಮನೆಯ ಮುಂಭಾಗ ನಿಲ್ಲಿಸಲಾಗಿದ್ದು, ಬೆಳಿಗ್ಗೆ ೫.೩೦ರ ಸಮಯದಲ್ಲಿ ನೋಡಿದಾಗ ಕಳುವಾಗಿರುವುದು ಕಂಡು ಬಂದಿದೆ. ಈ ಸಂಬಂಧ ಸಂತೋಷ್ ಎಂಬುವರು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
No comments:
Post a Comment