Sunday, June 4, 2023

ಎಂಪಿಎಂ ಪುನರ್ ಆರಂಭಿಸಿ, ಬಾಕಿ ಹಣ ಕೊಡಿಸಿ :

ನೊಂದ ನಿವೃತ್ತ ಕಾರ್ಮಿಕರಿಂದ ನೂತನ ಸಚಿವೆಗೆ ಮನವಿ

ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವುದು ಹಾಗು ನಿವೃತ ಕಾರ್ಮಿಕರಿಗೆ ನ್ಯಾಯಯುತವಾಗಿ ಬರಬೇಕಾದ ಬಾಕಿ ಹಣ ಕೊಡಿಸುವಂತೆ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ಭಾನುವಾರ ಮನವಿ ಸಲ್ಲಿಸಿದೆ.  
    ಭದ್ರಾವತಿ, ಜೂ. ೪ : ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವುದು ಹಾಗು ನಿವೃತ ಕಾರ್ಮಿಕರಿಗೆ ನ್ಯಾಯಯುತವಾಗಿ ಬರಬೇಕಾದ ಬಾಕಿ ಹಣ ಕೊಡಿಸುವಂತೆ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ಭಾನುವಾರ ಮನವಿ ಸಲ್ಲಿಸಿದೆ.  
    ದೇಶದ ಎರಡನೇ ಅತಿದೊಡ್ಡ ಕಾಗದ ಕಾರ್ಖಾನೆಯಾಗಿ ಗುರುತಿಸಿಕೊಂಡಿದ್ದ ಕ್ಷೇತ್ರದ ಹೆಮ್ಮೆಯ ಪ್ರತೀಕವಾದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ವೈಭವ ಇದೀಗ ಇತಿಹಾಸವಾಗಿ ಉಳಿದು ಬಿಟ್ಟಿದ್ದು, ಈ ಕಾರ್ಖಾನೆ ಪುನರ್ ಆರಂಭಿಸಿ ಗತ ವೈಭವ ಮರಳಬೇಕು.  ಈ ಹಿಂದೆ ಚುನಾವಣೆಗೂ ಮೊದಲು ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು. ಅಂದು ಎಂಪಿಎಂ ಕಾರ್ಖಾನೆ ಮನರ್ ಆರಂಭಿಸುವುದಾಗಿ ವಾಗ್ದಾನ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ತಾವು ಸಹ ಪಾಲ್ಗೊಂಡಿದ್ದು, ಇದೀಗ ತಾವು ಸರ್ಕಾರದಲ್ಲಿ ಸಚಿವರಾಗಿರುವುದು ಹೆಮ್ಮೆಯ ವಿಚಾರವಾಗಿದೆ. ತಕ್ಷಣ ಸಚಿವ ಸಂಪುಟ ಸಭೆಯಲ್ಲಿ ಕಾರ್ಖಾನೆ ಪುನರ್ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಕಾರ್ಖಾನೆಯಲ್ಲಿ ಸುಮಾರು ೩೦ ರಿಂದ ೪೦ ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿ ನಿವೃತ್ತಿ/ಸ್ವಯಂ ನಿವೃತ್ತಿ ಹೊಂದಿರುವ ನಮಗೆ ಕಾರ್ಖಾನೆಯಿಂದ ನ್ಯಾಯುತವಾಗಿ ಹಲವು ಬಾಕಿ ಹಣ ಬರಬೇಕಾಗಿದ್ದು, ತಕ್ಷಣ ಬಾಕಿ ಹಣ ವಿತರಲು ಸಂಬಂಧಿಸಿದವರಿಗೆ ಆದೇಶಿಸಬೇಕೆಂದು ಒತ್ತಾಯಿಸಲಾಗಿದೆ.
    ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಟಿ.ಜಿ ಬಸವರಾಜಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment