Monday, June 12, 2023

ಬಜರಂಗದಳ ಜಿಲ್ಲಾ ಸಹ ಸಂಚಾಲಕ ಸುನಿಲ್‌ಕುಮಾರ್ ನಿಧನ

ಸುನಿಲ್‌ಕುಮಾರ್
    ಭದ್ರಾವತಿ, ಜೂ. ೧೩: ನಗರದ ಕೇಶವಪುರ-ಭೂತನಗುಡಿ ನಿವಾಸಿ, ಬಜರಂಗದಳ ಜಿಲ್ಲಾ ಸಹ ಸಂಚಾಲಕ ಸುನಿಲ್‌ಕುಮಾರ್(೩೯) ನಿಧನ ಹೊಂದಿದರು.
    ಅಪ್ಪ, ಅಮ್ಮ, ಪತ್ನಿ, ಇಬ್ಬರು ಪುತ್ರಿಯರು ಇದ್ದರು. ಸುನಿಲ್‌ಕುಮಾರ್ ಹಲವಾರು ವರ್ಷಗಳಿಂದ ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದು, ಚಿಕ್ಕ ವಯಸ್ಸಿನಿಂದಲೇ ಹಲವಾರು ಹಿಂದೂಪರ ಹೋರಾಟಗಳಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು. ವಿಶೇಷವಾಗಿ ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ಉಚಿತವಾಗಿ ಮೃತದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
    ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇವರ ನಿಧನಕ್ಕೆ ಸಂಸದ ಬಿ.ವೈ ರಾಘವೇಂದ್ರ, ಬಜರಂಗದಳ ಪ್ರಮುಖರು, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

No comments:

Post a Comment