Monday, June 19, 2023

ಬಾಲ ಕಾರ್ಮಿಕರ ವಿರೋಧಿ ದಿನ : ಜಾಥಾಕ್ಕೆ ಚಾಲನೆ

ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬಾಲ ಕಾರ್ಮಿಕರ ವಿರೋಧಿ ದಿನದ ಅಂಗವಾಗಿ ಭದ್ರಾವತಿಯಲ್ಲಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಆರ್.ವೈ ಶಶಿಧರ ಜಾಥಾ ವಾಹನಕ್ಕೆ ಹಸಿರು ತೋರಿಸಿ ಚಾಲನೆ ನೀಡಿದರು
    ಭದ್ರಾವತಿ, ಜೂ. ೧೯: ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬಾಲ ಕಾರ್ಮಿಕರ ವಿರೋಧಿ ದಿನದ ಅಂಗವಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
    ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಆರ್.ವೈ ಶಶಿಧರ ಜಾಥಾ ವಾಹನಕ್ಕೆ ಹಸಿರು ತೋರಿಸಿ ಚಾಲನೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಿಸಿದ್ದರು.
    ಬಾಲ ಕಾರ್ಮಿಕರ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಕಾನೂನು ಅರಿವು ಹೊಂದಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕೆಂಬ ಆಶಯದೊಂದಿಗೆ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.
    ಕಾರ್ಮಿಕ ನಿರೀಕ್ಷಕಿ ಮಮ್ತಾಜ್ ಬೇಗಂ ಸೇರಿದಂತೆ ನ್ಯಾಯಾಧೀಶರು, ವಕೀಲರು ಹಾಗು ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

No comments:

Post a Comment