ಪ್ರೊ. ಬಿ. ಕೃಷ್ಣಪ್ಪ
ಭದ್ರಾವತಿ, ಜೂ. ೩೦ : ಕರ್ನಾಟಕ ದಲಿತ ನೌಕರರ ಒಕ್ಕೂಟ ತಾಲೂಕು ಶಾಖೆ ವತಿಯಿಂದ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನಾಚರಣೆ ಜು.೨ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಜೆಟಿಎಸ್ಶಾಲೆ ಸಮೀಪದಲ್ಲಿರುವ ಶುಗರ್ಟೌನ್ಲಯನ್ಸ್ಕ್ಲಬ್ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಉದ್ಘಾಟಿಸಲಿದ್ದು, ಒಕ್ಕೂಟದ ತಾಲೂಕು ಅಧ್ಯಕ್ಷೆ ಎಸ್. ಉಮಾ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್ಪ್ರೊ. ಬಿ. ಕೃಷ್ಣಪ್ಪನವರ ಪ್ರಶಸ್ತಿ ಪ್ರದಾನ ಮಾಡಲಿದ್ದು, ತಹಸೀಲ್ದಾರ್ಟಿ.ಜಿ ಸುರೇಶ್ಆಚಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಮೇಶ್ಮತ್ತು ನೌಕರರ ಒಕ್ಕೂಟದ ಪ್ರಭಾರ ಜಿಲ್ಲಾಧ್ಯಕ್ಷ ಸಿ.ಕೆ ಗಂಗಾಧರಮೂರ್ತಿ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ.
ನೌಕರರ ಒಕ್ಕೂಟದ ಗೌರವ ಸಲಹೆಗಾರ ಸಿ. ಜಯಪ್ಪ ಹೆಬ್ಬಳಗೆರೆ, ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್. ಗೋಪಾಲಪ್ಪ, ಇಂದಿರಾ ಪ್ರೊ. ಕೃಷ್ಣಪ್ಪ, ನಗರಸಭೆ ಉಪಾಧ್ಯಕ್ಷ ಸರ್ವಮಂಗಳ ಭೈರಪ್ಪ, ಡಿಎಸ್ಎಸ್ಜಿಲ್ಲಾ ಸಂಚಾಲಕ ಚಿನ್ನಯ್ಯ, ಬಿ. ಸಿದ್ದಬಸಪ್ಪ, ಪಿ. ಸುರೇಶ್, ಎನ್. ಉಮೇಶ್, ಕೆ.ಬಿ ಜುಂಜಾನಾಯ್ಕ್, ಕೆ.ಎನ್ಶ್ರೀಹರ್ಷ, ಡಾ. ವರ್ಷ ಮತ್ತು ರಂಗನಾಥ್ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment