ಮಾದಕ ವಸ್ತುಗಳ ಸಾಗಣಿಕೆ, ಸೇವನೆ ವಿರೋಧ ದಿನದ ಪ್ರಯುಕ್ತ ಭದ್ರಾವತಿ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಜೂ. ೨೭: ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದ್ದು, ಇದರಿಂದ ಯುವ ಸಮೂಹ ದಾರಿ ತಪ್ಪುತ್ತಿದೆ. ಸದೃಢ ಸಮಾಜ ನಿರ್ಮಾಣಕ್ಕೆ ಯುವ ಸಮೂಹ ಎಚ್ಚೆತ್ತುಕೊಳ್ಳಬೇಕೆಂದು ನಗರದ ಸಂಚಾರಿ ಪೊಲೀಸ್ ಠಾಣಾಧಿಕಾರಿ ಶಾಂತಲಾ ಹೇಳಿದರು.
ಅವರು ಜಿಲ್ಲಾ ಪೊಲೀಸ್ ಮಾರ್ಗದರ್ಶನದಲ್ಲಿ ಸಂಚಾರಿ ಠಾಣೆ ವತಿಯಿಂದ ಮಾದಕ ವಸ್ತುಗಳ ಸಾಗಣಿಕೆ, ಸೇವನೆ ವಿರೋಧ ದಿನದ ಪ್ರಯುಕ್ತ ನಗರದ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪಾರಿಣಾಮಗಳು ಹಾಗೂ ಸಂಚಾರ ನಿಯಮ ಪಾಲನೆ ಮತ್ತು ಅಪಘಾತ ನಿಯಂತ್ರಣ ಕುರಿತು ಜಾಗೃತಿ ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲ ಹಿರಿಯಣ್ಣ ಮತ್ತು ಉಪನ್ಯಾಸಕ ವೃಂದದವರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment