Tuesday, June 6, 2023

ಎಂಪಿಎಂ ಪ್ರಾರಂಭ ಕುರಿತು ಚರ್ಚಿಸಲು ಸಭೆ ನಿಗದಿಗೆ ಮುಖ್ಯಮಂತ್ರಿಗೆ ಮನವಿ

ಬಿ.ಕೆ ಸಂಗಮೇಶ್ವರ್
    ಭದ್ರಾವತಿ, ಜೂ. ೬: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಗರದ ಮೈಸೂರು ಕಾಗದ ಕಾರ್ಖಾನೆ ಪ್ರಾರಂಭಿಸಲು ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿ ಖಾಸಗಿ ಉದ್ಯಮಿಗಳ ಸಹಭಾಗಿತ್ವದಲ್ಲಿ ಪ್ರಾರಂಭಿಸಲು, ಚರ್ಚಿಸಲು ದಿನಾಂಕ ಹಾಗೂ ಸಮಯ ನಿಗದಿಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದ್ದಾರೆ.  
    ಖಾಸಗಿ ಉದ್ಯಮಿಗಳು ಕಾರ್ಖಾನೆಯನ್ನು ಮುನ್ನಡೆಸಲು ಇಚ್ಚಿಸಿರುವುದರಿಂದ ಹಾಗೂ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯಾಗುವುದರಿಂದ ಕಾರ್ಖಾನೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿ ಖಾಸಗಿ ಉದ್ಯಮಿಗಳ ಸಹಭಾಗಿತ್ವದಲ್ಲಿ ಪ್ರಾರಂಭಿಸಲು, ಚರ್ಚಿಸಲು ದಿನಾಂಕ ಹಾಗೂ ಸಮಯ ನಿಗದಿಪಡಿಸುವಂತೆ ಕೋರಿದ್ದಾರೆ.  

No comments:

Post a Comment