Saturday, June 3, 2023

ಜಾನಪದ ಕಲಾವಿದರಿಂದ ಬೀದಿ ನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆ, ನೀರಿನ ಅರಿವು

ಭದ್ರಾವತಿ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ನೆಹರು ಯುವ ಕೇಂದ್ರ, ಶಿವಮೊಗ್ಗ ಸಹಯೋಗದೊಂದಿಗೆ ಬೀದಿ ನಾಟಕ ಪ್ರದರ್ಶನಗಳ ಮೂಲಕ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.
    ಭದ್ರಾವತಿ, ಜೂ. ೩ : ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸುಂದರ ಪರಿಸರ ನಿರ್ಮಿಸಿಕೊಳ್ಳುವ ಹಾಗು ನೀರಿನ ಮಹತ್ವ ಹಾಗು ಸದ್ಬಳಕೆ ಕುರಿತು ಅರಿವು ಮೂಡಿಸುವಲ್ಲಿ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ಮುಂದಾಗಿದೆ.  
    ನೆಹರು ಯುವ ಕೇಂದ್ರ, ಶಿವಮೊಗ್ಗ ಸಹಯೋಗದೊಂದಿಗೆ ಬೀದಿ ನಾಟಕ ಪ್ರದರ್ಶನಗಳ ಮೂಲಕ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸೋಮವಾರ ಬೆಳಿಗ್ಗೆ ತಾಲೂಕು ಕಛೇರಿ ಮಿನಿ ವಿಧಾನಸೌಧದ ಆವರಣದಲ್ಲಿ  ಮಿಷನ್ ಲೈಫ್ ೨೦೨೩-೨೪ರ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನಕ್ಕೆ ತಹಸೀಲ್ದಾರ್ ಸುರೇಶ್ ಆಚಾರ್ ಚಾಲನೆ ನೀಡಿದರು.
    ಕಲಾಸಂಘದ ಮುಖ್ಯಸ್ಥ ತಮಟೆ ಜಗದೀಶ್, ಟಿ. ರಘುನಾಯ್ಕ, ಕೆ.ಆರ್ ಆಂಜನೇಯ, ನಾಗರಾಜ್ ನೀಲ್, ಬಿ. ಪ್ರವೀಣ್ ಕುಮಾರ್, ವೈ.ಕೆ ಹನುಮಂತಯ್ಯ, ಎಸ್. ಪಂಕಜ್, ಜಿ. ದಿವಾಕರ ಸೇರಿದಂತೆ ಇನ್ನಿತರ ಕಲಾವಿದರು ಪ್ರದರ್ಶನ ಯಶಸ್ವಿಯಾಗಿ ಕೈಗೊಂಡರು.
    ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ ಹಾಗೂ ರಂಗ ಕಲಾವಿದರು ಭದ್ರಾವತಿ ಸಂಘದ ಅಧ್ಯಕ್ಷ ಬಿ. ಕಮಲಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment