Friday, June 23, 2023

ಜೂ.೨೭ರಂದು ನಾಡಪ್ರಭು ಕೆಂಪೇಗೌಡ ಜಯಂತಿ

    ಭದ್ರಾವತಿ, ಜೂ. ೨೩ : ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಜೂ.೨೭ರಂದು ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
    ಬೆಳಿಗ್ಗೆ ೯.೩೦ಕ್ಕೆ ಬಿ.ಎಚ್ ರಸ್ತೆ ಹುತ್ತಾ ಬಸ್ ನಿಲ್ದಾಣದಿಂದ ತಾಲೂಕು ಕಛೇರಿವರೆಗೂ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಮಧ್ಯಾಹ್ನ ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ.
    ಒಕ್ಕಲಿಗ ಸಮುದಾಯದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯ ವಹಿಸಲಿದ್ದು, ಸಂಘದ ಅಧ್ಯಕ್ಷ ಎ.ಟಿ ರವಿ ಅಧ್ಯಕ್ಷತೆ ವಹಿಸಲಿದ್ದಾರೆ. ಒಕ್ಕಲಿಗ ಸಮುದಾಯದವರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಭಂಡಾರಹಳ್ಳಿ ಕೋರಿದ್ದಾರೆ.  

No comments:

Post a Comment