Friday, June 2, 2023

ಸಂಗಮೇಶ್ವರ್‌ಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಲಭಿಸಲಿ

ಬಿಳಿಕಿ ಶ್ರೀ ನೇತೃತ್ವದ ಸ್ವಾಮೀಜಿಗಳ ನಿಯೋಗ ಪ್ರಾರ್ಥನೆ

ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ   ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದ ಸ್ವಾಮೀಜಿಗಳ ನಿಯೋಗ ಭೇಟಿ ಮಾಡಿ ಸನ್ಮಾನಿಸಿ ಆಶೀರ್ವದಿಸುವ ಮೂಲಕ ಪ್ರಸಕ್ತ ಬೆಳವಣಿಗೆಗಳನ್ನು ಚರ್ಚಿಸಲಾಯಿತು.
    ಭದ್ರಾವತಿ, ಜೂ. ೩ : ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿರುವ ಬಿ.ಕೆ ಸಂಗಮೇಶ್ವರ್ ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಹ ಲಭಿಸುವಂತಾಗಲಿ ಎಂದು ತಾಲೂಕಿನ ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದ ಸ್ವಾಮೀಜಿಗಳ ನಿಯೋಗ ದೇವರಲ್ಲಿ ಪ್ರಾರ್ಥಿಸಿದೆ.
    ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ನೂತನ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಕೊನೆಯವರೆಗೂ ತೀವ್ರ ಪೈಪೋಟಿ ನಡೆಸಿದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಸ್ವಾಮೀಜಿಗಳ ನಿಯೋಗ ಭೇಟಿ ಮಾಡಿ ಸನ್ಮಾನಿಸಿ ಆಶೀರ್ವದಿಸುವ ಮೂಲಕ ಪ್ರಸಕ್ತ ಬೆಳವಣಿಗೆಗಳನ್ನು ಚರ್ಚಿಸಲಾಯಿತು.
    ರಟ್ಟಿಹಳ್ಳಿ ಶ್ರೀಗಳು, ಶಂಕರ ದೇವರ ಮಠದ ಶ್ರೀಗಳು ಹಾಗು ಎಸ್. ವಾಗೀಶ್, ಎಚ್. ಮಂಜುನಾಥ್, ಬಿ.ಎಂ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment