Friday, June 9, 2023

ಜೂ.೧೦ರಂದು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

    ಭದ್ರಾವತಿ, ಜೂ. ೯ :  ಸಮಾಜ ಸೇವಕ, ದಾನಿ ಎ. ಧರ್ಮೇಂದ್ರ ಅವರು ಪ್ರತಿ ವರ್ಷದಂತೆ ಈ ಬಾರಿ ಸಹ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ಜೂ. ೧೦ರಂದು ಶ್ರೀ ವಿನಾಯಕ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿತರಿಸುತ್ತಿದ್ದಾರೆ.  
    ೩ ಶಾಲೆಗಳ ವಿದ್ಯಾರ್ಥಿಗಳಿಗೆ ಒಟ್ಟು ೧೦ ಸಾವಿರ ಉಚಿತ ನೋಟ್ ಪುಸ್ತಕಗಳ ವಿತರಣೆ ನಡೆಯಲಿದೆ. ಬೆಳಿಗ್ಗೆ ೯ ಗಂಟೆಯಿಂದ ೧೦ ಗಂಟೆವರೆಗೆ ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ೧೦.೩೦ ರಿಂದ ೧೧.೩೦ರವರೆಗೆ ಕೂಡ್ಲಿಗೆರೆ ಹರಿಹರೇಶ್ವರ ಪ್ರೌಢಶಾಲೆಯಲ್ಲಿ ಹಾಗು ೧೨.೩೦ ರಿಂದ ೧ ಗಂಟೆವರೆಗೆ ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ಪ್ರೌಢಶಾಲೆಯಲ್ಲಿ ಉಚಿತ ಪುಸ್ತಕಗಳ ವಿತರಣೆ ನಡೆಯಲಿದೆ.


    ಕಳೆದ ಬಾರಿ ಸುಮಾರು ೮ ಸಾವಿರ ನೋಟ್ ಪುಸ್ತಕಗಳನ್ನು ವಿತರಿಸಲಾಗಿತ್ತು. ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಒದಗಿಸಲಾಗಿತ್ತು.

No comments:

Post a Comment