Thursday, June 8, 2023

ನಾಗೇಶ್ ಶೆಟ್ರು ನಿಧನ

ನಾಗೇಶ್ ಶೆಟ್ರು
ಭದ್ರಾವತಿ, ಜೂ. ೯ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ನಾಗೇಶ್ ಶೆಟ್ರು (೫೫) ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 
ನಾಗೇಶ್ ಶೆಟ್ರು ಕಾರ್ಖಾನೆಗೆ ಕೆಲಸಕ್ಕೆ ಆಗಮಿಸಿದಾಗ ಈ ಘಟನೆ ನಡೆದಿದ್ದು, ತಕ್ಷಣ ಇವರನ್ನು ಕಾರ್ಖಾನೆಯ ವಿಐಎಸ್‌ಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಗುತ್ತಿಗೆ ಕಾರ್ಮಿಕರು ನಾಗೇಶ್ ಶೆಟ್ರು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 
ಈ ನಡುವೆ ಆಸ್ಪತ್ರೆಯಲ್ಲಿ ವೈದ್ಯರು ಇದ್ದರೂ ಸಹ ೨೪ ಗಂಟೆಗಳ ಸೇವೆಯಲ್ಲಿ ಇರುವುದಿಲ್ಲ. ತುರ್ತು ಸಂದರ್ಭದಲ್ಲಿ ರೋಗಿ ದಾಖಲಾದ ನಂತರ ವೈದ್ಯರನ್ನು ಕರೆಸಿ ತಪಾಸಣೆ ನಡೆಸಲಾಗುತ್ತಿದೆ. ಇದರಿಂದ ಹೆಚ್ಚಿನ ಅನಾಹುತ ಸಂಭವಿಸುತ್ತಿದೆ ಎಂದು ಗುತ್ತಿಗೆ ಕಾರ್ಮಿಕರು ಆರೋಪಿಸಿದ್ದಾರೆ. 
ನಾಗೇಶ್ ಶೆಟ್ರು ಕುಟುಂಬಕ್ಕೆ ೫೦ ಸಾವಿರ ರು. ನಗದು ಹಾಗು ಕೆಲಸ ನೀಡುವುದಾಗಿ ಗುತ್ತಿಗೆದಾರ ಭರವಸೆ ನೀಡಿದ್ದಾರೆಂದು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. 
ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ನಗರಸಭಾ ಸದಸ್ಯ ಬಿ.ಕೆ ಮೋಹನ್ ಹಾಗು ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪುತ್ರ ಎಂ.ಎ ಅಜಿತ್ ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. 

No comments:

Post a Comment