ಭದ್ರಾವತಿ, ಜೂ. ೯: ವಿಧಾನಸಭಾ ಚುನಾವಣೆ ಪ್ರಕ್ರಿಯೆಗಳು ಮುಕ್ತಾಯಗೊಂಡು ನೂತನ ಸರ್ಕಾರ ರಚನೆಯಾದ ನಂತರ ಇದೀಗ ನಗರಸಭೆ ಸಾಮಾನ್ಯ ಸಭೆ ನಡೆಯುತ್ತಿದ್ದು, ಜೂ.೧೨ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ವಹಿಸಲಿದ್ದಾರೆ.
ಈ ಹಿಂದೆ ಮಾ.೧೮ರಂದು ಸಾಮಾನ್ಯ ಸಭೆ ನಡೆದಿದ್ದು, ಇದೀಗ ಸುಮಾರು ೨ ತಿಂಗಳ ನಂತರ ನಡೆಯುತ್ತಿದೆ. ಈಗಾಗಲೇ ಹಲವಾರು ಸಮಸ್ಯೆಗಳು ನಗರಸಭೆ ವ್ಯಾಪ್ತಿಯಲ್ಲಿ ಉಲ್ಬಣಗೊಂಡಿದ್ದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾಮಾನ್ಯಸಭೆ ಸಾರ್ಥಕಗೊಳ್ಳಬೇಕು. ಸದಸ್ಯರು ತಪ್ಪದೇ ಸಭೆಗೆ ಹಾಜರಾಗುವಂತೆ ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ.
No comments:
Post a Comment