Thursday, June 15, 2023

ವಿಐಎಸ್‌ಎಲ್ ನಿವೃತ್ತ ನೌಕರ ನರಸಿಂಹಯ್ಯ ನಿಧನ

ನರಸಿಂಹಯ್ಯ
    ಭದ್ರಾವತಿ, ಜೂ. ೧೫ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ವಿದ್ಯಾಮಂದಿರ ನಿವಾಸಿ ನರಸಿಂಹಯ್ಯ ನಿಧನ ಹೊಂದಿದರು.
    ಇವರಿಗೆ ಪತ್ನಿ, ಓರ್ವ ಪುತ್ರಿ ಇದ್ದರು. ಅನಾರೋಗ್ಯಕ್ಕೆ ಒಳಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
    ನರಸಿಂಹಯ್ಯ ಅವರು ಈ ಹಿಂದೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಹಲವಾರು ವರ್ಷಗಳಿಂದ ನಿವೃತ್ತ ಕಾರ್ಮಿಕರ ಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ನಿವೃತ್ತ ಕಾರ್ಮಿಕರನ್ನು ಸಂಘಟಿಸುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು.
    ಸಂತಾಪ :
    ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ರಾಮಲಿಂಗಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ ತುರ್ತು ಸಭೆ ನಡೆಸಿ ನರಸಿಂಹಯ್ಯನವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
    ಅವರ ಸೇವೆಯನ್ನು ಸ್ಮರಿಸಿ, ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ಪ್ರಮುಖರಾದ ಹನುಮಂತರಾವ್, ನರಸಿಂಹಚಾರ್, ಬಸವರಾಜ್, ಕೆಂಪಯ್ಯ, ಮಹೇಶ್ವರಪ್ಪ, ನಂಜಪ್ಪ, ಅಡವೀಶಯ್ಯ, ನಾಗರಾಜ್, ಜಯರಾಜ್, ಭೈರಪ್ಪ, ಹಾ. ರಾಮಪ್ಪ, ಗಜೇಂದ್ರ, ರವೀಂದ್ರ ರೆಡ್ಡಿ, ಮಂಜುನಾಥ್, ಸುರೇಶ್ ಪಟೇಲ್, ರಮೇಶ್, ಲಾಜರ್, ಡಾಕಪ್ಪ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment