Thursday, June 29, 2023

ಹಿರಿಯ ವೈದ್ಯ ಡಾ.ಕೆ.ಜಿ ಭಟ್ ನಿಧನ



ಭದ್ರಾವತಿ, ಜೂ. 29: ಸಿದ್ದಾರೂಢ ನಗರದ ನಿವಾಸಿ, ವಿಐಎಸ್ಎಲ್ ಕಾರ್ಖಾನೆಯ ನಿವೃತ್ತ  ವೈದ್ಯ ಡಾ.ಕೆ.ಜಿ ಭಟ್(67) ನಿಧನ ಹೊಂದಿದ್ದರು.
   ಇವರಿಗೆ ಓರ್ವ ಪುತ್ರ ಇದ್ದು, ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯ ರಾತ್ರಿ ಮೃತಪಟ್ಟಿದ್ದಾರೆ.   
      ಇವರ ಅಂತ್ಯಸಂಸ್ಕಾರ ಗುರುವಾರ ನಗರದ ಹಿಂದೂ ರುದ್ರ ಭೂಮಿಯಲ್ಲಿ ನೆರವೇರಿತು.
ಕೆ.ಜಿ. ಭಟ್ ಅವರು ವಿಐಎಸ್'ಎಲ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದರು. ನಂತರ ಖಾಸಗಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇವರ ಪತ್ನಿ ಡಾ.ಕವಿತಾ ಭಟ್ ಅವರು ಕಳೆದ  ವರ್ಷ ಡಿಸೆಂಬರ್ 26ರಂದು ಹೃದಯಾಘಾತದಿಂದ ನಿಧನರಾಗಿದ್ದರು.  
  ಇವರ ನಿಧನಕ್ಕೆ ನಗರದ ಅನೇಕ ಗಣ್ಯರು, ವೈದ್ಯರು ಸಂತಾಪ ಸೂಚಿಸಿದ್ದಾರೆ.

No comments:

Post a Comment