Wednesday, June 14, 2023

ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ

ಭದ್ರಾವತಿ ತಾಲೂಕು ದಂಡಾಧಿಕಾರಿಗಳು, ತಹಸೀಲ್ದಾರ್ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕಿನ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ ನಡೆಯಿತು.
    ಭದ್ರಾವತಿ, ಜೂ. ೧೪ : ತಾಲೂಕು ದಂಡಾಧಿಕಾರಿಗಳು, ತಹಸೀಲ್ದಾರ್ ಹಾಗು ತಾಲೂಕು ಆರೋಗ್ಯಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕಿನ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ ನಡೆಯಿತು.
    ಸಭೆಯಲ್ಲಿ ಎಂ.ಆರ್ ಎಲಿಮಿನೇಷನ್, ಐಡಿಸಿಎಫ್, ಎಲ್‌ಸಿಡಿಸಿ, ಕೆಎಫ್‌ಡಿ, ಕೋಟ್ಪಾ, ಎನ್‌ವಿಬಿಡಿಸಿಪಿ, ಕೋವಿಡ್-೧೯, ಫ್ಲೋರೋಸಿಸ್, ಆರ್‌ಬಿಎಸ್‌ಕೆ, ಎನ್‌ಟಿಇಪಿ, ಕೆಎಫ್‌ಡಿ ಕುರಿತು ಸಮಗ್ರವಾಗಿ ಚರ್ಚಿಸಿ ಮಾಹಿತಿ ನೀಡಲಾಯಿತು.
    ತಹಸೀಲ್ದಾರ್ ಸುರೇಶ್ ಆಚಾರ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರಸಭೆ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ವಸಂತ, ಆನಂದಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment