Saturday, June 24, 2023

ಕೇಸರಿಪಡೆಯಿಂದ ಜೆಪಿಎಸ್ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ

ಭದ್ರಾವತಿ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಶನಿವಾರ ಜೆಪಿಎಸ್ ಕಾಲೋನಿ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ, ಜೂ. ೨೪ : ಹಲವಾರು ವರ್ಷಗಳಿಂದ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಶನಿವಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
    ನಗರಸಭೆ ವ್ಯಾಪ್ತಿಯ ಜೆಪಿಎಸ್ ಕಾಲೋನಿ ಸರ್ಕಾರಿ ಶಾಲೆಯ ಸುಮಾರು ೪೦ ಮಕ್ಕಳಿಗೆ ಪ್ರಸಕ್ತ ಸಾಲಿಗೆ ಅಗತ್ಯವಿರುವಷ್ಟು ಪುಸ್ತಕ, ಪೆನ್ನು, ಪೆನ್ಸಿಲ್, ಶಾಲಾ ಬ್ಯಾಗ್ ಸೇರಿದಂತೆ ಲೇಖನ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಲಾಯಿತು.
    ಯುನೈಟೆಡ್ ಇನ್ಸೂರೆನ್ಸ್ ವಿ. ಪ್ರಕಾಶ್ ಶೆಟ್ಟಿ, ಶಾಲೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು, ಸ್ಥಳೀಯ ಮುಖಂಡರು, ಶಾಲೆಯ ಮಕ್ಕಳ ಪೋಷಕರು, ಕೇಸರಿ ಪಡೆ ಪ್ರಮುಖರು ಉಪಸ್ಥಿತರಿದ್ದರು.

No comments:

Post a Comment