Monday, July 10, 2023

ಜೈನ ಮುನಿ ಹತ್ಯೆಗೆ ಖಂಡನೆ : ಮೌನ ಮೆರವಣಿಗೆ

ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಜೈನ ಧರ್ಮದ ಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಖಂಡಿಸಿ ಸೋಮವಾರ ಭದ್ರಾವತಿ ಹಳೆನಗರದ ಜೈನ ಮಂದಿರದಿಂದ ಬೆಳಗ್ಗೆ ಜೈನ ಸಮುದಾಯದವರು ಮೌನ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಭದ್ರಾವತಿ, ಜು. 10:  ಬೆಳಗಾವಿ ಜಿಲ್ಲೆ ಚಿಕ್ಕೋಡಿ ಜೈನ ಧರ್ಮದ ಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಖಂಡಿಸಿ ಸೋಮವಾರ ಹಳೆ ನಗರದ ಜೈನ ಮಂದಿರದಿಂದ ಬೆಳಗ್ಗೆ ಜೈನ ಸಮುದಾಯದವರು ಮೌನ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

      ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತ ಮೂಲಕ ತಹಸೀಲ್ದಾರ್ ಕಚೇರಿವರೆಗೂ ಮೌನ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಯಿತು.

     ಪ್ರಮುಖರು ಮಾತನಾಡಿ, ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು, ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು. ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ದುಷ್ಕೃತ್ಯಗಳು ನಡೆಯದಂತೆ  ಎಚ್ಚರಿಕೆ ವಹಿಸಬೇಕು. ಅಲ್ಲದೆ ಶಾಂತಿ, ಸೌಹಾರ್ದತೆ ಹಾಗು ಅಹಿಂಸಾ ಮಾರ್ಗದಲ್ಲಿ ಸಾಗುತ್ತಿರುವ ಜೈನ ಸಮುದಾಯಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.

     ಮೌನ ಮೆರವಣಿಗೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್), ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

    ಜೈನ ಸಮಾಜದ ಅಧ್ಯಕ್ಷ ರತನ್ಚಂದ್ಜೈನ್, ಸಂಚಾಲಕರಾದ ಸಂಪತ್ರಾವ್ಬಾಂಟಿಯಾ, ಸಂದೇಶ್ಜೈನ್ಮೆಹ್ತಾ, ಭರತ್ಕುಮಾರ್, ರಾಹುಲ್ಜೈನ್, ಗೌತಮ್ಚಂದ್, ರಾಜ್ಕುಮಾರ್, ಪ್ರೇಮ್ಕುಮಾರ್, ಅನಿತಾ, ಕಾಂಚನಾ, ಲೇಖನಾ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

No comments:

Post a Comment