ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಕೆಲವು ಮಠಾಧೀಶರು ಯಡಿಯೂರಪ್ಪನವರನ್ನು ಭೇಟಿ ಮಾಡಿ ಆಶೀರ್ವದಿಸಿದ್ದಾರೆ.
ಭದ್ರಾವತಿ, ಜು. ೨೨ : ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಕೆಲವು ಮಠಾಧೀಶರು ಯಡಿಯೂರಪ್ಪನವರನ್ನು ಭೇಟಿ ಮಾಡಿ ಆಶೀರ್ವದಿಸಿದ್ದಾರೆ.
ಬಿಳಿಕಿ ಹಿರೇಮಠದ ಶ್ರೀರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಶಿಲಾಮಠದ ಶ್ರೀ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗು ಶಂಕರ ದೇವರ ಮಠದ ಸ್ವಾಮೀಜಿಯವರು ಯಡಿಯೂರಪ್ಪನವರನ್ನು ಭೇಟಿ ಮಾಡಿ ಅಭಿನಂದಿಸುವ ಮೂಲಕ ಅಶೀರ್ವದಿಸಿದರು.
ವೀರಶೈವ ಲಿಂಗಾಯತ ಮಠಾಧೀಶರ ವೇದಿಕೆಯಿಂದ ಶಿವಮೊಗ್ಗ ವೀರಶೈವ ಸಾಂಸ್ಕೃತಿಕ ಸಭಾಭವನದಲ್ಲಿ ಜು. 26ರ ಬುಧವಾರ ಬೆಳಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿರುವ ಸಮಾರಂಭಕ್ಕೆ ಆಮಂತ್ರಿಸಲಾಯಿತು.
No comments:
Post a Comment