Thursday, July 6, 2023

ಆಧುನಿಕ ಕಾವ್ಯ ಓದು, ವಿಶ್ಲೇಷಣೆಗೆ ಆಧುನಿಕ ಕಾಲಘಟ್ಟದ ಅರಿವು ಅಗತ್ಯ : ಡಾ. ಕುಮಾರ ಚಲ್ಯ

ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರು ಹಾಗು ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರಿಗೆ ಪಠ್ಯವನ್ನು ಆಧರಿಸಿದ ಸಾಹಿತ್ಯ ರಸಗ್ರಹಣ ಶಿಬಿರದಲ್ಲಿ ಆಧುನಿಕ ಕಾವ್ಯ ಓದು, ವಿಶ್ಲೇಷಣೆ ಕುರಿತು ಮಾತನಾಡಿದರು. 
    ಭದ್ರಾವತಿ, ಜು. ೬ : ಆಧುನಿಕ ಕಾಲಘಟ್ಟದ ಅರಿವು ಹೊಂದಿರುವವರಿಗೆ ಮಾತ್ರ ಆಧುನಿಕ ಸಾಹಿತ್ಯದ ಅರಿವು ತಿಳಿಯಲು ಸಾಧ್ಯ. ಆ ನೆಲೆಗಟ್ಟಿನಲ್ಲಿಯೇ ಒಂದು ಸಾಹಿತ್ಯದ ಕಾವ್ಯದ ಓದು, ವಿಶ್ಲೇಷಣೆ ನಡೆಯಬೇಕಾಗಿದೆ  ಎಂದು ಕುವೆಂಪು ವಿಶ್ವ ವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಕುಮಾರ ಚಲ್ಯ ಹೇಳಿದರು.
    ಅವರು ಗುರುವಾರ  ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರು ಹಾಗು ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರಿಗೆ ಪಠ್ಯವನ್ನು ಆಧರಿಸಿದ ಸಾಹಿತ್ಯ ರಸಗ್ರಹಣ ಶಿಬಿರದಲ್ಲಿ ಆಧುನಿಕ ಕಾವ್ಯ ಓದು, ವಿಶ್ಲೇಷಣೆ ಕುರಿತು ಮಾತನಾಡಿದರು.
    ಪ್ರಾಚೀನ ಕಾಲಘಟ್ಟ ಹಾಗು ಆಧುನಿಕ ಕಾಲಘಟ್ಟಗಳ ನಡುವೆ ಸಾಕಷ್ಟು ವ್ಯತ್ಯಾಸಗಳಿವೆ. ಆಧುನಿಕತೆ ಬೆಳೆದಂತೆ ನಾಗರೀಕ ಸಮಾಜ ಸಹ ಬೆಳವಣಿಗೆ ಹೊಂದಿದೆ. ಈ ನಡುವೆ ರೂಪುಗೊಂಡ ಸಾಹಿತ್ಯದ ಕುರಿತು ಹೆಚ್ಚಿನ ಅರಿವು ಅಗತ್ಯವಾಗಿದೆ. ಆಧುನಿಕ ಸಾಹಿತ್ಯದ ಕಾವ್ಯ-ಓದು, ವಿಶ್ಲೇಷಣೆ ವಿಭಿನ್ನವಾಗಿದೆ. ಇದರ ಕುರಿತು ಇಂದಿನ ಪೀಳಿಗೆಯವರು ತಿಳಿದುಕೊಳ್ಳಬೇಕಾಗಿದೆ ಎಂದರು.
    ಆಧುನಿಕ ಸಾಹಿತ್ಯದ ಕಾವ್ಯ ಓದುವ ಬಗೆ ಹಾಗು ವಿಶ್ವೇಷಣೆ ಮಾಡುವ ವಿಧಾನಗಳನ್ನು ಶಿಕ್ಷಕರಿಗೆ ವಿವರಿಸಿದರು.
    ನಗರಸಭೆ ಸದಸ್ಯ ಬಿ.ಕೆ ಮೋಹನ್‌ ಶಿಬಿರ ಉದ್ಘಾಟಿಸಿ ಮಾತನಾಡಿ, ಕನ್ನಡ ಸಾಹಿತ್ಯಪರ ಚಟುವಟಿಕೆಗಳು ಹೆಚ್ಚಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲು ಶಾಸಕರು ಬದ್ದರಾಗಿದ್ದು, ಶಿಕ್ಷಕರು ಶಿಬಿರದ ಸದುಪಯೋಗಪಡೆದುಕೊಳ್ಳಬೇಕೆಂದರು.
    ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ  ಎಂ.ಎಸ್  ಸುಧಾಮಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ. ಕೆ. ನಾಗೇಂದ್ರಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೆ. ಬಸವರಾಜಪ್ಪ, ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ ಮತ್ತು ಪ್ರಶಾಂತ ಸಣ್ಣಕ್ಕಿ ಉಪಸ್ಥಿತರಿರುವರು.
    ಹಳೇನಗರ ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವಾನಾಥ್‌, ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಮಾಜಿ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ರಾಜಸ್ವ ನಿರೀಕ್ಷಕ ಪ್ರಶಾಂತ್‌, ಶಿಕ್ಷಣ ಸಂಯೋಜಕ ರವಿಕುಮಾರ್‌, ಶಿಕ್ಷಕ ಎ. ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸುಮತಿ ಕಾರಂತ್‌ ಪ್ರಾರ್ಥಿಸಿದರು. ಶಿಕ್ಷಕಿ ಮಾಯಮ್ಮ ನಿರೂಪಿಸಿದರು. ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು ಪಾಲ್ಗೊಂಡಿದ್ದರು.

No comments:

Post a Comment