ಮೋರ್ಚಾಗಳ ಸಂಯುಕ್ತ ಸಮಾವೇಶದಲ್ಲಿ ಸಂಸದ ಬಿ.ವೈ ರಾಘವೇಂದ್ರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9ನೇ ವರ್ಷ ಪೂರೈಸಿದ ಹಿನ್ನಲೆಯಲ್ಲಿ ಭದ್ರಾವತಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಭಾನುವಾರ ಏರ್ಪಡಿಸಲಾಗಿದ್ದ ʻಮೋರ್ಚಾಗಳ ಸಂಯುಕ್ತ ಸಮಾವೇಶʼ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿ, ಜು. ೧೦ : ಕೇಂದ್ರ ಸರ್ಕಾರದ ಉಡಾನ್ಯೋಜನೆ ಮಹತ್ವದ ಯೋಜನೆಯಾಗಿದ್ದು, ಇಂದು ಸಾಮಾನ್ಯ ಜನರು ಅತಿ ಕಡಿಮೆ ಖರ್ಚಿನಲ್ಲಿ ವಿಮಾನ ಪ್ರಯಾಣ ಮಾಡುವಂತಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9ನೇ ವರ್ಷ ಪೂರೈಸಿದ ಹಿನ್ನಲೆಯಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಭಾನುವಾರ ಏರ್ಪಡಿಸಲಾಗಿದ್ದ ʻಮೋರ್ಚಾಗಳ ಸಂಯುಕ್ತ ಸಮಾವೇಶʼ ಉದ್ಘಾಟಿಸಿ ಮಾತನಾಡಿದರು.
ಉಡಾನ್ಯೋಜನೆಯಿಂದಾಗಿ ದೇಶ ಇಂದು ಸರ್ವತೋಮುಖ ಅಭಿವೃದ್ಧಿಯಲ್ಲಿ ಸಾಗುವಂತಾಗಿದೆ. ಸಣ್ಣ ಸಣ್ಣ ನಗರಗಳಲ್ಲೂ ಇಂದು ವಿಮಾನಯಾನ ಸಂಪರ್ಕ ಸಾಧಿಸುವಂತಾಗಿದೆ ಎಂದರು.
ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗಿದ್ದು, ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಯಾಗಬೇಕಾಗಿದೆ. ಅಲ್ಲದೆ ಕೈಗಾರಿಕೋದ್ಯಮ ಬೆಳವಣಿಗೆ ಹೊಂದಬೇಕಾಗಿದೆ. ಈ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಅಭಿಯಾನ ಪ್ರಮುಖ ಅಶೋಕ್ ಮೂರ್ತಿ, ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಜಿಲ್ಲಾ ಕಾರ್ಯದರ್ಶಿ ಎಂ. ಪ್ರಭಾಕರ್, ಮಂಡಲ ಪ್ರದಾನ ಕಾರ್ಯದರ್ಶಿ ಚನ್ನೇಶ್, ಹಿರಿಯ ಕಾರ್ಯಕರ್ತರಾದ ವಿಶ್ವನಾಥ ಕೋಠಿ. ಎಸ್.ಎನ್ ಬಾಲಕೃಷ್ಣ. ನಗರಸಭಾ ಸದಸ್ಯರಾದ ವಿ. ಕದಿರೇಶ್, ಶಶಿಕಲಾ ನಾರಾಯಣಪ್ಪ. ಅನುಪಮ ಚನ್ನೇಶ್. ಅನಿತಾ ಮಲ್ಲೇಶ್. ಜಿ. ಆನಂದ್ ಕುಮಾರ್, ಎಂ. ಮಂಜುನಾಥ್. ಎಂ.ಎಸ್ಸುರೇಶಪ್ಪ. ರಾಮಲಿಂಗಯ್ಯ. ವಿಶ್ವನಾಥ್ ರಾವ್. ಕರಿ ಗೌಡ, ಮೋರ್ಚಾ ಅಧ್ಯಕ್ಷರುಗಳು, ಮುಖಂಡರು, ಜಿಲ್ಲಾ ಪ್ರಮುಖರಾದ ಎಂ.ಜೆ ಸುಬ್ರಮಣಿ, ನಾಗರಾಜ್ ಅಂಬೋರೆ. ರೇಖಾ ಪದ್ಮಾವತಿ, ಧನುಷ್, ಚಂದ್ರಪ್ಪ, ಕೃಷ್ಣಮೂರ್ತಿ, ಎಂ ಶೇಖರಪ್ಪ, ಇಮ್ರಾನ್, ಉಮಾವತಿ, ಲೋಲಾಕ್ಷಮ್ಮ. ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖ ಕಾರ್ಯಕರ್ತರು ಪಾಲ್ಗೊಂಡಿದ್ದರು.
No comments:
Post a Comment