ಟಿ.ಜಿ ಸುರೇಶ್ ಆಚಾರ್
ಭದ್ರಾವತಿ, ಜು. ೨೯ : ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಹಸೀಲ್ದಾರ್ ಗ್ರೇಡ್-೧ ಹುದ್ದೆಗೆ ವರ್ಗಾವಣೆಯಾಗಿ ಬಂದಿದ್ದ ಟಿ.ಜಿ ಸುರೇಶ್ ಆಚಾರ್ ಅವರನ್ನು ಪುನಃ ವರ್ಗಾವಣೆಗೊಳಿಸಲಾಗಿದೆ.
ಈ ಹಿಂದಿನ ತಹಸೀಲ್ದಾರ್ ಆರ್. ಪ್ರದೀಪ್ ಅವರ ಸ್ಥಳಕ್ಕೆ ವರ್ಗಾವಣೆಗೊಂಡು ಬಂದಿದ್ದ ಸುರೇಶ್ ಆಚಾರ್ ಅವರನ್ನು ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ತಹಸೀಲ್ದಾರ್ ಗ್ರೇಡ್-೧ ಹುದ್ದೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರಿಂದ ತೆರವಾಗಿರುವ ಹುದ್ದೆಗೆ ಇದುವರೆಗೂ ಯಾರನ್ನು ನಿಯೋಜನೆಗೊಳಿಸಿಲ್ಲ.
No comments:
Post a Comment