ಹಲವಾರು ವರ್ಷಗಳಿಂದ ಭದ್ರಾವತಿ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಭದ್ರಾವತಿ, ಜು. ೨೭ : ಹಲವಾರು ವರ್ಷಗಳಿಂದ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
ತಾಲೂಕಿನ ರಾಮನಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕೇಸರಿಪಡೆವತಿಯಿಂದ ಪ್ರಸಕ್ತ ಸಾಲಿಗೆ ಅಗತ್ಯವಿರುವಷ್ಟು ಪುಸ್ತಕ, ಪೆನ್ನು, ಪೆನ್ಸಿಲ್, ಶಾಲಾ ಬ್ಯಾಗ್ ಸೇರಿದಂತೆ ಲೇಖನ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಲಾಯಿತು.
ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು, ಶಾಲೆಯ ಮಕ್ಕಳ ಪೋಷಕರು, ಕೇಸರಿ ಪಡೆ ಪ್ರಮುಖರು ಉಪಸ್ಥಿತರಿದ್ದರು.
ಈಗಾಗಲೇ ಕಳೆದ ಸುಮಾರು ೨ ತಿಂಗಳಿನಿಂದ ಕೇಸರಿಪಡೆವತಿಯಿಂದ ಹಲವು ಸರ್ಕಾರಿ ಶಾಲೆಗಳಲ್ಲಿ ಬಡಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಗಿದೆ.
No comments:
Post a Comment