Saturday, July 1, 2023

ಹೊಸಮನೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಭದ್ರಾವತಿ ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳುದೇಹದಾರ್ಢ್ಯ ಮತ್ತು ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಭದ್ರಾವತಿ, ಜು. : ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ದೇಹದಾರ್ಢ್ಯ ಮತ್ತು ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

      ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜು. 26 ಮತ್ತು 27 ರಂದು ಜರುಗಿದ    ಕುವೆಂಪು ವಿಶ್ವವಿದ್ಯಾಲಯ ಪುರುಷ ಮತ್ತು ಮಹಿಳೆಯರ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ದೇಹದಾರ್ಢ್ಯ ಮತ್ತು ಭಾರ ಎತ್ತುವ ಸ್ಪರ್ಧೆಯಲ್ಲಿ ಕಾಲೇಜಿನ  ದ್ವಿತೀಯ ಬಿ ಎವಿದ್ಯಾರ್ಥಿಗಳಾದ ಡಿ. ಸಂಜಯ್   ಚಿನ್ನದ ಪದಕ ಮತ್ತು ಆಸಿಫ್ ಭಾಷಾ ಬೆಳ್ಳಿ ಪದಕ ಹಾಗು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಯು. ಕಿರಣ್  ಚಿನ್ನದ ಪದಕ,  ತೃತೀಯ ಬಿ.ಕಾಂ ವಿದ್ಯಾರ್ಥಿನಿಯರಾದ ಎಸ್. ಅನುಷಾ   ಚಿನ್ನದ ಪದಕ ಮತ್ತು ಎಸ್. ಕೃತಿಕಾ ಹಾಗು ದ್ವಿತೀಯ ಬಿ. ವಿದ್ಯಾರ್ಥಿನಿ ಜೆ. ಕೀರ್ತನ ಬೆಳ್ಳಿ ಪದಕ   ತಮ್ಮದಾಗಿಸಿಕೊಳ್ಳುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

            ವಿಜೇತ ವಿದ್ಯಾರ್ಥಿಗಳನ್ನು  ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್,  ಪ್ರಾಂಶುಪಾಲ ಡಾ. ಮಂಜುನಾಥ ಸಕಲೇಶ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಡಿ ವಿಶ್ವನಾಥ್  ಮತ್ತು ಅಧ್ಯಾಪಕ ಹಾಗು ಸಿಬ್ಬಂದಿ ವರ್ಗದವರು  ಅಭಿನಂದಿಸಿದ್ದಾರೆ.

 

No comments:

Post a Comment