Thursday, August 31, 2023

ಶ್ರೀ ನುಲಿಯ ಚಂದಯ್ಯನವರ 916ನೇ ಜಯಂತ್ಯೋತ್ಸವ

ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕುಳುವ ಸಮಾಜ(ಕೊರಚ-ಕೊರಮ-ಕೊರವ) ಹಾಗು ತಾಲೂಕು ಪಂಚಾಯಿತಿ ಮತ್ತು ನಗರಸಭೆ ಸಹಯೋಗದೊಂದಿಗೆ ಗುರುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನುಲಿಯ ಚಂದಯ್ಯನವರ 916ನೇ ಜಯಂತ್ಯೋತ್ಸವದಲ್ಲಿ ಕೊರಚ-ಕೊರಮ-ಕೊರವ ಸಮಾಜದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಆ. 31: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕುಳುವ ಸಮಾಜ(ಕೊರಚ-ಕೊರಮ-ಕೊರವ) ಹಾಗು ತಾಲೂಕು ಪಂಚಾಯಿತಿ ಮತ್ತು ನಗರಸಭೆ ಸಹಯೋಗದೊಂದಿಗೆ ಗುರುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯನವರ 916ನೇ ಜಯಂತ್ಯೋತ್ಸವ ನಡೆಯಿತು.
    ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ದಲಿತ ನೌಕರರ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಸಿ. ಜಯಪ್ಪ ಹೆಬ್ಬಳಗೆರೆ ಉಪನ್ಯಾಸ ನೀಡಿದರು.
    ತಹಸೀಲ್ದಾರ್ ಗ್ರೇಡ್-2 ವಿ. ರಂಗಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ನಗರಸಭೆ ಮಾಜಿ ಸದಸ್ಯ ಶಿವರಾಜ್, ದಲಿತ ನೌಕರರ ಒಕ್ಕೂಟದ ತಾಲೂಕು ಗೌರವಾಧ್ಯಕ್ಷ ಎಂ. ಈಶ್ವರಪ್ಪ, ಯುವ ಮುಖಂಡ ಬಿ.ಎಂ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕೊರಚ-ಕೊರಮ-ಕೊರವ ಸಮಾಜದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದಕ್ಕೂ ಮೊದಲು ನಗರದ ರಂಗಪ್ಪ ವೃತ್ತದಿಂದ ತಾಲೂಕು ಪಂಚಾಯಿತಿವರೆಗೂ ಶ್ರೀ ನುಲಿಯ ಚಂದಯ್ಯನವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು. ಶ್ರೀನಿವಾಸ್ ಜಾಜೂರ್ ನಿರೂಪಿಸಿ, ನಾಗೇಶ್ ಸ್ವಾಗತಿಸಿ, ನವೀನ್ ವಂದಿಸಿದರು.

No comments:

Post a Comment