Saturday, August 12, 2023

ಪೊಲೀಸ್ ಠಾಣೆ ಜನಸ್ನೇಹಿಯಾಗಿಸಲು ‘ತೆರೆದ ಮನೆ’ ಕಾರ್ಯಕ್ರಮ

ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಸಂಚಾರಿ ಪೊಲೀಸರು

ಭದ್ರಾವತಿ ಸಂಚಾರಿ ಠಾಣೆ ಪೊಲೀಸರು ಶನಿವಾರ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಕಾಲೇಜಿನ ಪ್ರೌಢಶಾಲೆ ವಿಭಾಗದ ಮಕ್ಕಳನ್ನು ಠಾಣೆಗೆ ಕರೆತರುವ ಮೂಲಕ ಪೊಲೀಸ್ ಠಾಣೆ ಜನಸ್ನೇಹಿಯಾಗಿಸಲು 'ತೆರೆದ ಮನೆ' ಕಾರ್ಯಕ್ರಮ ಕುರಿತು ಅರಿವು ಮೂಡಿಸಿದರು.
    ಭದ್ರಾವತಿ, ಆ. ೧೨: ಸಮಾಜದಲ್ಲಿ ಪೊಲೀಸ್ ಠಾಣೆ ಎಂದರೆ ಈಗಲೂ ಬಹುತೇಕ ಮಂದಿಗೆ ಭಯ. ಅದರಲ್ಲೂ ಕೆಲವರು ಸಮಸ್ಯೆಗಳು ಎದುರಾದರೂ ಸಹ ಠಾಣೆ ಬಳಿ ಮಾತ್ರ ಸುಳಿಯುವುದಿಲ್ಲ. ಇನ್ನೂ ಮಕ್ಕಳಿಗೆ ಪೊಲೀಸರು ಕಂಡರೇ ಭಯ. ಇಂತಹ ವಾತಾವರಣ ದೂರವಾಗಿಸಿ ಪೊಲೀಸ್ ಠಾಣೆಗಳನ್ನು ಜನಸ್ನೇಹಿಗಳನ್ನಾಗಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿದೆ.
    ತೆರೆದ ಮನೆ ಎಂಬ ಕಾರ್ಯಕ್ರಮದ ಮೂಲಕ ಪೊಲೀಸ್ ಠಾಣೆಗಳನ್ನು ಜನಸ್ನೇಹಿಗಳನ್ನಾಸಲು ಇಲಾಖೆ ಪ್ರಯತ್ನಿಸುತ್ತಿದೆ. ಪೊಲೀಸ್ ಠಾಣೆಗಳ ಬಗ್ಗೆ ಹೊಂದಿರುವ ಮನೋಭಾವನೆ ದೂರವಾಗಿಸಿ ಅಪರಾಧಗಳ ಕುರಿತು ಹಾಗು ಠಾಣೆಗಳ ಕಾರ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
    ಈ ಹಿಂದೆ ಆರಂಭಗೊಂಡಿದ್ದ ತೆರೆದ ಮನೆ ಕಾರ್ಯಕ್ರಮ ಇದೀಗ ಪುನಃ ಆರಂಭಿಸಲಾಗಿದ್ದು, ನಗರದ ಸಂಚಾರಿ ಠಾಣೆ ಪೊಲೀಸರು ಶನಿವಾರ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಕಾಲೇಜಿನ ಪ್ರೌಢಶಾಲೆ ವಿಭಾಗದ ಮಕ್ಕಳನ್ನು ಠಾಣೆಗೆ ಕರೆತರುವ ಮೂಲಕ ಕಾರ್ಯಕ್ರಮ ಕುರಿತು ಅರಿವು ಮೂಡಿಸಿದರು.
    ಠಾಣಾ ನಿರೀಕ್ಷಕಿ ಶಾಂತಲ ಹಾಗು ಸಿಬ್ಬಂದಿಗಳು ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸಿದ ಕಾಲೇಜಿನ ಪ್ರೌಢಶಾಲೆ ವಿಭಾಗದ ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

No comments:

Post a Comment