Saturday, August 5, 2023

ಸಂವಾದ : ನಗರಕ್ಕೆ ಆ.೮ರಂದು ಬಹುಭಾಷಾ ಚಲನಚಿತ್ರ ನಟ ಪ್ರಕಾಶ್‌ ರಾಜ್‌

ಪ್ರಕಾಶ್‌ ರಾಜ್‌
    ಭದ್ರಾವತಿ, ಆ. ೦೫:  ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್‌ ಟ್ರಸ್ಟ್‌ ಸಹಯೋಗದೊಂದಿಗೆ ಆ.೮ರಂದು ಬೆಳಿಗ್ಗೆ ೧೦.೩೦ಕ್ಕೆ ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಸಂವಾದ ಹಮ್ಮಿಕೊಳ್ಳಲಾಗಿದೆ.
    ಬಹುಭಾಷಾ ಚಲನಚಿತ್ರ ನಟ ಪ್ರಕಾಶ್‌ ರಾಜ್‌ ವಿಷಯ ಮಂಡಿಸಲಿದ್ದು, ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
    ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌, ಡಿಎಸ್‌ಎಸ್‌ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಪ್ರಗತಿಪರ ಮುಖಂಡ ಸುರೇಶ್‌, ರೈತ ಮುಖಂಡ ಬಾಲಕೃಷ್ಣ, ಸಮಾಲೋಚನೆ ಮನೋಶಾಸ್ತ್ರಜ್ಞೆ ಬಿ. ಅರುಣಾ ಭಾಸ್ಕರ್‌ ಮತ್ತು ಕಾರುಣ್ಯ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಜಿ. ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

No comments:

Post a Comment